August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು, ದಶಂಬರ್ 5 :- ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ  ಭೂ ಕಂದಾಯ, ಭೂ ಮಂಜೂರಾತಿ ನಿಯಮ, ಭೂ ಸುಧಾರಣಾ, ಭೂ ಸ್ವಾಧೀನ ಕಾಯ್ದೆ, ನಿಯಮ ಇನ್ನಿತರ ಕಾಯ್ದೆ ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡಲು ಸೃಷ್ಟಿಸಲಾಗಿರುವ ಕಾನೂನು ಸಲಹೆಗಾರರ ಹುದ್ದೆಗೆ ನಿವೃತ್ತ ನ್ಯಾಯಾಧೀಶರು, ನಿವೃತ್ತ ಕಂದಾಯ ಇಲಾಖೆಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ರೂಪಾಯಿ 70,000 ವೇತನ ಮತ್ತು ನಿವೃತ್ತ ಕಂದಾಯ ಇಲಾಖೆಯ ನೌಕರರಿಗೆ (ನಿವೃತ್ತ ತಹಶೀಲ್ದಾರ್, ಉಪತಹಶೀಲ್ದಾರ್) ರೂಪಾಯಿ 40,000 ಮಾಸಿಕ  ವೇತನ ನಿಗಧಿಗೊಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಬಯೋಡೇಟಾ ಮತ್ತು ದಾಖಲೆಗಳೊಂದಿಗೆ ಮಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸೆಂಬರ್ 20ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಬಂದರ್ ರಸ್ತೆ, ಮಂಗಳೂರು ಇಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page