May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

ಸಾಕಷ್ಟು ಮಲೆಕುಡಿಯ ಕುಟುಂಬಗಳು ರಸ್ತೆ ಹಾಗೂ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿವೆ. ಪ್ರಥಮ ಆಧ್ಯತೆಯಾಗಿ ವಿದ್ಯುತ್ ಹಾಗೂ ರಸ್ತೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ಹಂತ ಹಂತವಾಗಿ ಮಲೆಕುಡಿಯ ಸಮುದಾಯದ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಹೇಳಿದರು.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲೆಕುಡಿಯ ಸಮುದಾಯದ ಮುಖಂಡರ ಬೇಡಿಕೆ, ಸಮಸ್ಯೆಗಳನ್ನು ಆಲಿಸಿದ ಅವರು ಮಲೆಕುಡಿಯ ಸಮುದಾಯದ ವಿವಿಧ ಸಮಸ್ಯೆಗಳ ಪರಿಹಾರ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಹಾಗೂ ಮಲೆಕುಡಿಯ ಸಂಘದ ಪ್ರಮುಖರ ಜೊತೆ ಸಮಾಲೋಚನೆ ನಡೆಸಿದರು.

ಮಲೆಕುಡಿಯರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಎಳನೀರು ಮಾತನಾಡಿ ಮಲೆಕುಡಿಯ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 10-15 ವರ್ಷದಿಂದ ಬೇಡಿಕೆಯನ್ನು ಸಲ್ಲಿಸುತ್ತಾ ಬಂದಿದ್ದು ಇದುವರೆಗೂ ಫಲಪ್ರದವಾಗಿಲ್ಲ. ವಿದ್ಯುತ್ ಪಡೆಯಲು ಯಾವ ರೀತಿ ಅರ್ಜಿ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದರು. ಜೊತೆಗೆ ವಿವಿಧ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಸರಿಯಾದ ಮಾಹಿತಿ ಇಲಾಖೆಗಳಿಂದ ದೊರೆಯುತ್ತಿಲ್ಲ ಹಾಗಾಗಿ ಸಾಕಷ್ಟು ಜನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದರು. ಸುಲ್ಕೇರಿಯ ನಾಯಿದಗುರಿಯ ಸಮಸ್ಯೆಯನ್ನು ಆದಷ್ಟು ಬೇಗ ಇತ್ಯರ್ಥಪಡಿಸಬೇಕು ಎಂದು ಎಂದು ಆಗ್ರಹಿಸಲಾಯಿತು.

ವಿದ್ಯುತ್ ಸಂಪರ್ಕ ಪಡೆಯುವ ಬಗ್ಗೆ ವೆಂಕಪ್ಪ ಬೊಟ್ಟಿತ್ತಿಲ್ ಇಲಾಖಾಧಿಕಾರಿಗಳಿಗೆ ದಾಖಲೆ ತೋರಿಸಿದರು. ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ಜಯಾನಂದ ಪಿಲಿಕಲ ಜಾತಿ ಪ್ರಮಾಣ ಪತ್ರವನ್ನು ಮಲೆಕುಡಿಯ ಎಂಬುದಾಗಿ ನೀಡಬೇಕು ಎಂದು ಆಗ್ರಹಿಸಿದರು ಹಾಗೂ 94 ಸಿ ಸಮಸ್ಯೆಯನ್ನು ಗಮನಕ್ಕೆ ತಂದರು.

ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಲಬೆರಕೆ ಹಾಗೂ ಕಳಪೆ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಮನೆ ಇಲ್ಲದಿರುವುದು, ರೇಷನ್ ಕಾರ್ಡ್ ಇಲ್ಲದಿರುವುದು, ಅಕ್ರಮ ಸಕ್ರಮ, ಹೀಗೆ ಸಮುದಾಯದ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಯಿತು. ರಾಜ್ಯ ಮಲೆಕುಡಿಯ ಸಂಘದ ಉಪಾಧ್ಯಕ್ಷೆ ವಸಂತಿ ನೆಲ್ಲಿಕಾರು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಾರ್ಯದರ್ಶಿ ಜಯೇಂದ್ರ ಎಂ. ನಿಡ್ಲೆ, ಜೊತೆ ಕಾರ್ಯದರ್ಶಿ ಲಕ್ಷಣ ನೆರಿಯ, ಸದಸ್ಯೆ ವಿನೋದಾ ಪುತ್ತೂರು, ತನಿಯಪ್ಪ ಬೆಟ್ಟಂಪಾಡಿ, ಉಮೇಶ್ ನಾರಾವಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page