ಬಂಟ್ವಾಳದ ಬಾಂಬಿಲದಲ್ಲಿ KSRTC ಬಸ್ಸು ಹಾಗೂ ಬೈಕ್ ಢಿಕ್ಕಿ – ಸವಾರ ಮೃತ್ಯು
ಬಂಟ್ವಾಳ : KSRTC ಬಸ್ಸು ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಬಿ.ಸಿ. ರೊಡು – ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಬಾಂಬಿಲದಲ್ಲಿ ದಶಂಬರ್ 5ರಂದು ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ 45ವರ್ಷ ಪ್ರಾಯದ ರಾಜೇಂದ್ರ ಪೂಜಾರಿ ಮೃತಪಟ್ಟವರು. ಅವರು ಬಿ.ಸಿ. ರೋಡಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಬಸ್ಸು ಬೆಳ್ತಂಗಡಿ ಭಾಗದಿಂದ ಮಂಗಳೂರಿಗೆ ತೆರಳುತ್ತಿತ್ತು.
ಮೃತ ರಾಜೇಂದ್ರ ಅವರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ಸು- ಬೈಕ್ ಢಿಕ್ಕಿ ಹೊಡೆದ ಜಾಗದ ಅನತಿ ದೂರದಲ್ಲಿ ದಶಂಬರ್ 4ರಂದು ಬುಧವಾರ ಸಂಜೆ ಕಾರು ಹಾಗೂ ಆಟೋ ರಿಕ್ಷಾ ಢಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟು, ಇತರ ಪ್ರಯಾಣಿಕರು ಗಾಯಗೊಂಡಿದ್ದರು.