June 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಬಾಂಬಿಲದಲ್ಲಿ KSRTC ಬಸ್ಸು ಹಾಗೂ ಬೈಕ್ ಢಿಕ್ಕಿ – ಸವಾರ ಮೃತ್ಯು

ಬಂಟ್ವಾಳ :  KSRTC ಬಸ್ಸು ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಬಿ.ಸಿ. ರೊಡು – ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಬಾಂಬಿಲದಲ್ಲಿ ದಶಂಬರ್ 5ರಂದು ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ 45ವರ್ಷ ಪ್ರಾಯದ ರಾಜೇಂದ್ರ ಪೂಜಾರಿ ಮೃತಪಟ್ಟವರು. ಅವರು ಬಿ.ಸಿ. ರೋಡಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ವೇಳೆ  ಈ ಅಪಘಾತ ನಡೆದಿದ್ದು, ಬಸ್ಸು ಬೆಳ್ತಂಗಡಿ ಭಾಗದಿಂದ ಮಂಗಳೂರಿಗೆ ತೆರಳುತ್ತಿತ್ತು.

ಮೃತ ರಾಜೇಂದ್ರ ಅವರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ಸು- ಬೈಕ್ ಢಿಕ್ಕಿ ಹೊಡೆದ ಜಾಗದ ಅನತಿ ದೂರದಲ್ಲಿ ದಶಂಬರ್ 4ರಂದು ಬುಧವಾರ ಸಂಜೆ ಕಾರು ಹಾಗೂ ಆಟೋ ರಿಕ್ಷಾ ಢಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟು, ಇತರ ಪ್ರಯಾಣಿಕರು ಗಾಯಗೊಂಡಿದ್ದರು.

You may also like

News

ಮಂಗಳೂರಿನ ಕುವರಿಗೆ ಒಲಿದ ದೂರದರ್ಶನ ಮನ್ನಣೆ : ಬಿ-ಗ್ರೇಡ್ ಭರತನಾಟ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ

ಕರಾವಳಿಯ ಸಾಂಸ್ಕೃತಿಕ ನಗರಿ ಮಂಗಳೂರಿನ ಪ್ರತಿಭಾನ್ವಿತ ಯುವತಿ, ಕುಮಾರಿ ರೆಮೋನಾ ಎವೆಟ್ ಪೆರೇರಾ ಅವರು ಪ್ರಸಾರ ಭಾರತಿಯ ದೂರದರ್ಶನ ಚಂದನ ವಾಹಿನಿ ನಡೆಸಿದ ಕಠಿಣ ಆಡಿಷನ್‌ನಲ್ಲಿ ಯಶಸ್ವಿಯಾಗಿ
News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ

You cannot copy content of this page