January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೇರಳಕಟ್ಟೆಯಲ್ಲಿ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ಉದ್ಘಾಟನೆ

ಸೆಕೆಂಡ್ ಹ್ಯಾಂಡ್ ವಾಹನ ಮಾರಾಟದಲ್ಲಿ ಹೆಸರುವಾಸಿಯಾದ ಸಂಸ್ಥೆ

ಬಂಟ್ವಾಳ : ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಎಚ್.ಎಂ.ಎಸ್. ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ದಶಂಬರ್ 8ರಂದು ಭಾನುವಾರ ಬೆಳಿಗ್ಗೆ ಶುಭಾರಂಭಗೊಂಡಿತು.

ಸಯ್ಯಿದ್ ಹಂಝ ತಂಙಳ್ ಅಲ್ ಹಾದಿ ನೂತನ ಮಳಿಗೆಯನ್ನು ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಪ್ರಾರ್ಥನೆ ನೆರವೇರಿಸಿದರು. ಸಾಬುಚ್ಚ ತಿಂಗಳಾಡಿ, ಹಾರಿಸ್ ಮುಸ್ಲಿಯಾರ್, ಕೊಡಾಜೆ ಐಕ್ಯ ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ, ಕೋಶಾಧಿಕಾರಿ ರಿಯಾಝ್ ನೇರಳಕಟ್ಟೆ, ಪ್ರಮುಖರಾದ ಹಮೀದ್ ಪರ್ಲೊಟ್ಟು, ಅಬ್ದುಲ್ ಖಾದರ್ ಕಬಕ, ಶರೀಫ್ ಸೂರ್ಯ, ಆಶಿಫ್ ಬೋಳಂತೂರು, ಇಬ್ರಾಹಿಂ ಎಸ್.ಎಂ.ಎಸ್. ಸಲೀಂ ಪರ್ಲೊಟ್ಟು ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಪ್ರಥಮ ಕಾರು ಖರೀದಿದಾರರಾದ ಜಾಫರ್ ಸ್ವಾದಿಕ್ ಅರ್ಶದಿ ಅವರಿಗೆ ಪಾಟ್ರಕೋಡಿ ತಂಙಳ್ ಅವರು ಕಾರಿನ ಕೀ ಹಸ್ತಾಂತರಿಸಿದರು. ಭಾರತ್ ವೆಹಿಕಲ್ ಬಜಾರ್ ಮಾಲೀಕ ಅಶ್ರಫ್ ತಿಂಗಳಾಡಿ ಸ್ವಾಗತಿಸಿ, ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page