July 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೇರಳಕಟ್ಟೆಯಲ್ಲಿ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ಉದ್ಘಾಟನೆ

ಸೆಕೆಂಡ್ ಹ್ಯಾಂಡ್ ವಾಹನ ಮಾರಾಟದಲ್ಲಿ ಹೆಸರುವಾಸಿಯಾದ ಸಂಸ್ಥೆ

ಬಂಟ್ವಾಳ : ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಎಚ್.ಎಂ.ಎಸ್. ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ದಶಂಬರ್ 8ರಂದು ಭಾನುವಾರ ಬೆಳಿಗ್ಗೆ ಶುಭಾರಂಭಗೊಂಡಿತು.

ಸಯ್ಯಿದ್ ಹಂಝ ತಂಙಳ್ ಅಲ್ ಹಾದಿ ನೂತನ ಮಳಿಗೆಯನ್ನು ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಪ್ರಾರ್ಥನೆ ನೆರವೇರಿಸಿದರು. ಸಾಬುಚ್ಚ ತಿಂಗಳಾಡಿ, ಹಾರಿಸ್ ಮುಸ್ಲಿಯಾರ್, ಕೊಡಾಜೆ ಐಕ್ಯ ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ, ಕೋಶಾಧಿಕಾರಿ ರಿಯಾಝ್ ನೇರಳಕಟ್ಟೆ, ಪ್ರಮುಖರಾದ ಹಮೀದ್ ಪರ್ಲೊಟ್ಟು, ಅಬ್ದುಲ್ ಖಾದರ್ ಕಬಕ, ಶರೀಫ್ ಸೂರ್ಯ, ಆಶಿಫ್ ಬೋಳಂತೂರು, ಇಬ್ರಾಹಿಂ ಎಸ್.ಎಂ.ಎಸ್. ಸಲೀಂ ಪರ್ಲೊಟ್ಟು ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಪ್ರಥಮ ಕಾರು ಖರೀದಿದಾರರಾದ ಜಾಫರ್ ಸ್ವಾದಿಕ್ ಅರ್ಶದಿ ಅವರಿಗೆ ಪಾಟ್ರಕೋಡಿ ತಂಙಳ್ ಅವರು ಕಾರಿನ ಕೀ ಹಸ್ತಾಂತರಿಸಿದರು. ಭಾರತ್ ವೆಹಿಕಲ್ ಬಜಾರ್ ಮಾಲೀಕ ಅಶ್ರಫ್ ತಿಂಗಳಾಡಿ ಸ್ವಾಗತಿಸಿ, ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

You may also like

News

ಕೆನರಾ ಬ್ಯಾಂಕ್ ₹8 ಲಕ್ಷ ಸಾಲ – ಲೋಕ ಅದಾಲತ್‌ನಲ್ಲಿ ₹15 ಸಾವಿರಕ್ಕೆ ಇತ್ಯರ್ಥ

ಮಾನವೀಯತೆ ಮೆರೆದ ನ್ಯಾಯಾಲಯ ಕಾನೂನು ಕೇವಲ ನಿಯಮಗಳ ಸಂಕಲನ ಮಾತ್ರವಲ್ಲ, ಅದರ ಹಿಂದೆ ಮಾನವೀಯತೆಯ ಹೃದಯವೂ ಇದೆ ಎಂಬುದನ್ನು ಚಿಕ್ಕಮಗಳೂರಿನಲ್ಲಿ ನಡೆದ ಒಂದು ಅಪರೂಪದ ಘಟನೆ ಮತ್ತೊಮ್ಮೆ
News

Father Muller Homoeopathic Medical College Hosts Dr M.L. Dhawale Memorial Seminar 2026

The Department of Practice of Medicine, Father Muller Homoeopathic Medical College & Hospital, Deralakatte, Mangalore, organised the Dr M.L. Dhawale

You cannot copy content of this page