February 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ “ಕೋಟಿ – ಚೆನ್ನಯ ಕ್ರೀಡೋತ್ಸವ 2025” ಇದರ ಲಾಂಛನ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ‌ತಾಲೂಕು‌  ಬಿಲ್ಲವ ಸೇವಾ ಸಂಘ ಹಾಗೂ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜನವರಿ 19ರಂದು  ನಡೆಯುವ  ತಾಲೂಕು ಮಟ್ಟದ “ಕೋಟಿ – ಚೆನ್ನಯ ಕ್ರೀಡೋತ್ಸವ 2025” ಇದರ ಲಾಂಛನ  ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ದಶಂಬರ್ 8ರಂದು ಭಾನುವಾರ ನಡೆಯಿತು.

ಲಾಂಛನ ಬಿಡುಗಡೆಗೊಳಿಸಿದ ಉದ್ಯಮಿ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಶ್ ಡಿ. ಸುವರ್ಣ ಮಾತನಾಡಿ, ಬಹಳ ಅರ್ಥಪೂರ್ಣವಾಗಿ ಕೋಟಿ – ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಲಾಂಛನ ಬಿಡುಗಡೆಯಾಗಿದೆ, ಮುಂದೆ ನಡೆಯುವ ಕ್ರೀಡೋತ್ಸವ ಕಾರ್ಯಕ್ರಮವೂ ಅತ್ಯಂತ ಯಶಸ್ವಿಯಾಗಿ ನಡೆಯುವಲ್ಲಿ ಸಮಿತಿಯ ಜೊತೆ ಸಮಾಜದ ಬಾಂದವರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಮೂಲಕ ಸಮಾಜ ಮುಖಿಯಾದ ಉತ್ತಮ ಕಾರ್ಯ ನಡೆಯಲಿ ‌ಎಂದು ತಿಳಿಸಿದ ಅವರು, ಬಿಲ್ಲವ ಸಮಾಜದ ಯುವ ಕ್ರೀಡಾಪಟುಗಳು ಕ್ರೀಡೆಯ ಮೂಲಕ ಸಾಧನೆಯನ್ನು ಮಾಡಲು ಇಂತಹ ಕ್ರೀಡೋತ್ಸವ ಕಾರ್ಯಕ್ರಮ ಬಾರಿ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗುರುಕೃಪಾ ಸಂಜೀವ ಪೂಜಾರಿ ಮಾತನಾಡಿ, ಶಿಸ್ತುಬದ್ದವಾದ ಕಾರ್ಯಕ್ರಮ ಮೂಡಿಬರುವ ಮೂಲಕ, ತಾಲೂಕಿನ ಬಿಲ್ಲವರು ಸಂಘಟಿತರಾಗಲು ಕ್ರೀಡೋತ್ಸವ ಕಾರ್ಯಕ್ರಮ ಸಕಾಲಿಕವಾಗಿದೆ.  ಪಕ್ಷ ಬೇಧ ಮರೆತು ಮನೆಯ ಕಾರ್ಯಕ್ರಮ ಎಂಬ ದೃಷ್ಟಿಯಿಂದ ಭಾಗವಹಿಸಿ ಎಂದು ಮನವಿ ಮಾಡಿದರು.

ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರುಗಳಾದ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ ಮಾರ್ನಬೈಲು, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ತುಂಬೆ, ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಪ್ರಚಾರ ಸಮಿತಿ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಆನಂದ ಶಂಭೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೋಟಿ ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಸಂಚಾಲಕ ಬೇಬಿ ಕುಂದರ್ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ತುಂಬೆ ವಂದಿಸಿದರು. ಹಾಗೂ ಧನ್ಯವಾದ ನೀಡಿದರು. ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಶಾಲಾ ಮಕ್ಕಳನ್ನು ಟಿಪ್ಪರ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದ ಪ್ರಕರಣ

ಮುಖ್ಯ ಶಿಕ್ಷಕ ಅಮಾನತು, ಎಫ್‌ಐಆರ್ ದಾಖಲು ಬೆಳ್ತಂಗಡಿ: ಶಾಲಾ ಮಕ್ಕಳನ್ನು ಅಧ್ಯಯನ ಪ್ರವಾಸದ ಹೆಸರಿನಲ್ಲಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕುರಿಗಳಂತೆ ತುಂಬಿಸಿ ಕರೆದೊಯ್ದ ಘಟನೆಗೆ ಸಂಬಂಧಿಸಿದಂತೆ,
News

ಅಮೆರಿಕದಲ್ಲಿ ರಸ್ತೆ ಅಪಘಾತ

ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಭಾರಿ ಪರಿಹಾರ ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ 2023ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ

You cannot copy content of this page