January 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೆಲ್ಕಾರ್ ಮಹಿಳಾ ಕಾಲೇಜು ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ : ಮಾರ್ನಬೈಲು ಇಲ್ಲಿನ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟವು ದಶಂಬರ್ 7ರಂದು ಶನಿವಾರ ಕಾಲೇಜು ಆವರಣದಲ್ಲಿ ಜರುಗಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ “ಕಲ್ಲಡ್ಕ ಮ್ಯೂಸಿಯಮ್” ನ ಮಾಲಕ ಕೆ.ಎಸ್. ಮೊಹಮ್ಮದ್ ಯಾಸೀರ್ ಮಾತನಾಡಿ, ಪಾಠದೊಂದಿಗೆ ಆಟವೂ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿಯಾಗಿದ್ದು, ಇದರಿಂದ ದೈಹಿಕ, ಮಾನಸಿಕ ಧೃಡತೆ, ಉಲ್ಲಾಸ ಹೆಚ್ಚಾಗುವುದರೊಂದಿಗೆ ಆರೋಗ್ಯ ವರ್ಧನೆಗೂ ಇದು ಸಹಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್. ಮಾತನಾಡುತ್ತಾ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಕ್ಷಮತೆಗೆ ಪೂರಕವಾಗಿದೆ, ಸ್ಪರ್ದೆಯಲ್ಲಿ ಗೆಲ್ಲುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲೆ ಸುನಿತಾ ಪಿರೇರಾ, ಉಪನ್ಯಾಸಕರಾದ ಹನೀಫ್ ಎಂ., ರಕ್ಷಿತಾ ಕುಮಾರಿ, ಸಂಪ್ರೀತ ಉಪಸ್ಥಿತರಿದ್ದರು. ಇದೇ ವೇಳೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕಲ್ಲಡ್ಕ ಮ್ಯೂಸಿಯಂನ ಸ್ಥಾಪಕ ಮೊಹಮ್ಮದ್ ಯಾಸಿರ್ ಅವರನ್ನು ಉಪನ್ಯಾಸಕ ಎಂ.ಡಿ. ಮಂಚಿ ಅವರು ಸನ್ಮಾನಿಸಿದರು. ವಿದ್ಯಾರ್ಥಿನಿ ಮಹ್ರೂಫ ಸ್ವಾಗತಿಸಿ, ಅಸ್ಬಹುನ್ನಿಸ ವಂದಿಸಿದರು. ನಝ್ಮಿಯ ಜಾಸ್ಮಿನ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು ಹಾಗೂ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

You may also like

News

ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ ಎಲ್ಲಾ ಪ್ರಕರಣಗಳನ್ನು ಮುಂದಿನ 6 ತಿಂಗಳಲ್ಲಿ ಇತ್ಯರ್ಥ –  ಕೃಷ್ಣ ಬೈರೇಗೌಡ

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಮುಂದಿನ ಆರು ತಿಂಗಳ ಒಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ
News

ಎರಡು ಬೈಕ್ ಗಳ ಮುಖಮುಖಿ ಡಿಕ್ಕಿ – ಸಹ ಪ್ರಯಾಣಿಕೆ ಬಾಲಕಿ ಇಸ್ಮತ್ ಆಯಿಶಾ ಮೃತ್ಯು

ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜನವರಿ 14ರಂದು ಮಂಗಳವಾರ ರಾತ್ರಿ ಮಂಗಳೂರು –

You cannot copy content of this page