January 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಿಜೈಯಲ್ಲಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ ಶಿಶುವಿಹಾರದ ವಾರ್ಷಿಕೋತ್ಸವ -“ನನ್ನ ಬಣ್ಣದ ಜಗತ್ತು”

ಮಂಗಳೂರು ನಗರದ ಲೂರ್ಡ್ಸ್ ಶಿಕ್ಷಣ ಸಂಸ್ಥೆಯು ಶಿಶುವಿಹಾರ ವಿಭಾಗದ ವಾರ್ಷಿಕೋತ್ಸವನ್ನು ಆಚರಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಶಿಶುವಿಹಾರದಲ್ಲಿ ಮಕ್ಕಳ ಪ್ರಗತಿಗೆ ಬೇಕಾದ ಉತ್ತಮ ಶಿಕ್ಷಣ ಮತ್ತು ಚಟುವಟಿಕೆಗಳನ್ನು ನೀಡುತ್ತಾ, ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಮೌಲ್ಯಯುತ ಶಿಕ್ಷಣ ನೀಡಿ ಪ್ರಗತಿ ಪಥದತ್ತ ಸಾಗುತ್ತಲಿದೆ.

ಮಕ್ಕಳ ಕ್ರಿಯಾಶೀಲತೆಗೆ ಅಧ್ಯಾಪಕರು ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳು ದೇವರು ಕೊಟ್ಟ ಉಡುಗೊರೆ, ಅವರನ್ನು ಸಾಮಾಜಿಕ, ಬೌದ್ಧಿಕ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ತೊಡಗಿಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳಿಗೆ ಪ್ರೋತ್ಸಾಹ, ಪ್ರೀತಿ ವಾತ್ಸಲ್ಯ ನೀಡಿ ಅವರನ್ನು ಉತ್ತಮ ಪ್ರಜೆಗಳಾಗಿ ರೂಪಿಸಿಕೊಳ್ಳಬೇಕು ಮತ್ತು ಸ್ವಲ್ಪ ಸಮಯವನ್ನು ತಮ್ಮ ಮಕ್ಕಳಿಗೊಸ್ಕರ ಮೀಸಲಿಡಬೇಕು ಎಂದು ಮಕ್ಕಳ ತಜ್ಞೆ ಡಾ. ಚಂದನಾ ಪೈ ಕರೆ ನೀಡಿದರು. ಅವರು ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಆಯೋಜಿಸಿದ ಶಿಶುವಿಹಾರ ವಿಭಾಗದ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು.

 

 

ಮೌಲ್ಯಯುತ ಶಿಕ್ಷಣವನ್ನು ನಮ್ಮ ಯುವ ಮನಸ್ಸುಗಳಿಗೆ ನೀಡಬೇಕು. ಮಕ್ಕಳ ಬೆಳವಣಿಗೆಗೆ ಪೋಷಕರ ಪಾತ್ರ ಅತೀ ಮುಖ್ಯ, ಮಕ್ಕಳನ್ನು ಶಿಸ್ತು ಮತ್ತು ಸಂಯಮದಿಂದ ಬೆಳೆಸಬೇಕು. ಒತ್ತಡಯುಕ್ತ ಜೀವನವನ್ನು ಹೇಗೆ ನಿಭಾಯಿಸಬೇಕೆಂದು ಮಕ್ಕಳಿಗೆ ಸೂಚಿಸಬೇಕು ಎಂದು ಶಾಲೆಯ ಸಂಚಾಲಕ ವಂದನೀಯ ಡಾ.ಜೋನ್ ಬ್ಯಾಪ್ಟಿಸ್ಟ್ ಸಲ್ಡಾನಾ ಸಂದೇಶ ನೀಡಿದರು. ಶಾಲೆಯ ಪ್ರಾಂಶುಪಾಲರಾದ ವಂದನನೀಯ ಫಾದರ್ ಜಾನ್ಸನ್ ಎಲ್. ಸಿಕ್ವೇರಾ ವಾರ್ಷಿಕ ವರದಿಯ ಪಕ್ಷಿನೋಟವನ್ನು ಬೀರಿದರು. ವೇದಿಕೆಯಲ್ಲಿ ಬಿಜೈ ಚರ್ಚ್ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಶೋಕ್ ಪಿಂಟೋ, ಕಾರ್ಯದರ್ಶಿ ಅವಿತಾ ಸಿಂಥಿಯಾ ಪಿಂಟೋ, ಉಪಪ್ರಾಂಶುಪಾಲೆಯರಾದ ಬೆಲಿಟಾ ಮಸ್ಕರೇನ್ಹಸ್, ಅನಿತಾ ಥೋಮಸ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಮುಖ್ಯ ಅತಿಥಿಗಳಾದ ಡಾ. ಚಂದನಾ ಪೈ ಅವರನ್ನು ಸ್ಮರಣಿಕೆ ನೀಡಿ, ಶಾಲು ಹೊದಿಸಿ ಸನ್ಮಾನಿಸಿದರು. ಲೀಡಿಯಾ ಡಿಸೋಜ ಇವರು ನೆರೆದಿರುವ ಎಲ್ಲರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು.

ಶಿವಾಂಶ್ ಮಲಿಕ್ ಮತ್ತು ನಾತ್‌ಲಿನ್ ಮಿರಾಂದ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಶುವಿಹಾರದ ಕೆಜಿ-2 ವಿಭಾಗದ ಮಕ್ಕಳು ಧನ್ಯವಾದ ಸಮರ್ಪಿಸಿದರು. ಪುಟಾಣಿ ಮಕ್ಕಳು ಬಣ್ಣದ ಜಗತ್ತಿನ ಕುರಿತು ನೃತ್ಯ ನಾಟಕವನ್ನು ಪ್ರಸ್ತುತ ಪಡಿಸಿ ಸರ್ವರನ್ನು ಮನೋರಂಜಿಸಿದರು.

You may also like

News

ಬೆನಕ ಆಸ್ಪತ್ರೆಯ ರಜತ ಸಂಭ್ರಮ – ಆಧುನಿಕ ತಂತ್ರಜ್ಞಾನದ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಉಜಿರೆ : “ರೋಗಿಗಳ ಸೇವೆಗೆ ಕೇಂದ್ರೀಕೃತವಾಗಿ ಅತ್ಯುತ್ತಮ ದರ್ಜೆಯ ಅರೋಗ್ಯ ಸುಶ್ರೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಆಸ್ಪತ್ರೆಯಾಗಿ ಬೆಳೆಯಬೇಕು ಎಂಬುವುದು
News

ರಾಜ್ಯ ಮಟ್ಟದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆ ಬೆಥನಿ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ಜನವರಿ 8 ಮತ್ತು 9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ

You cannot copy content of this page