January 18, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌದಿ ಅರೇಬಿಯಾದಲ್ಲಿ ಬಂಟ್ವಾಳ ಸಮೀಪದ ವಗ್ಗ ನಿವಾಸಿ ಅಪಘಾತದಲ್ಲಿ ಮೃತ್ಯು

ಬಂಟ್ವಾಳ : ಸೌದಿ ಅರೇಬಿಯಾದ ತಬೂಕ್ ಸಮೀಪದ ಅಲ್ ಉಲಾ ಎಂಬ ಪ್ರದೇಶದಲ್ಲಿ ದಶಂಬರ್ 9ರಂದು ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಮೇಲಿನ ವಗ್ಗ ನಿವಾಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೇಲಿನ ವಗ್ಗದ ಈಗಲ್ ಕುಟುಂಬದ ದಿವಂಗತ ಮುಹಮ್ಮದ್ ಯಾನೆ ಪುತ್ತೂಬಾವ ಎಂಬವರ ಪುತ್ರ 35 ವರ್ಷ ಪ್ರಾಯದ ಇಬ್ರಾಹೀಮ್ ನವಾಜ್ ಮೃತ ಯುವಕ. ಈ ಹಿಂದೆ ಊರಿನಲ್ಲಿ ಬಿ.ಸಿ. ರೋಡು ಸಮೀಪದ ಮಿತ್ತಬೈಲು ಎಂಬಲ್ಲಿ ಟಾಪ್ ಆಂಡ್ ಟಾಪ್ ಹೆಸರಿನ ಕಾರು ಉದ್ಯಮ ನಡೆಸುತ್ತಿದ್ದು ಟಾಪ್ ಆಂಡ್ ಟಾಪ್ ನವಾಜ್ ಎಂದೇ ಗುರುತಿಸಿಕೊಂಡಿದ್ದ. ಬಳಿಕ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದರು. ಬಳಿಕ ಇವರು ಇತ್ತೀಚಿಗೆ ಸುಮಾರು ಆರು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಸೋಮವಾರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈತ ವಗ್ಗ ನಿವಾಸಿ, ಕಾಂಗ್ರೆಸ್ ಮುಖಂಡ, ಬೀಡಿ ಉದ್ಯಮಿ ಇ.ಕೆ. ಲತೀಫ್ ಅವರ ಸಹೋದರಿಯ ಪುತ್ರ.

ಮೃತರು ಪತ್ನಿ, ತಾಯಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತದೇಹ ಇಂದು ದಶಂಬರ್ 11ರಂದು ಬುಧವಾರ ಅಸರ್ ನಮಾಜ್ ಬಳಿಕ ಅಲ್ ಉಲಾ ಸೂಕ್ ಅಲ್ ಕುದ್ರಾ ಬಳಿಯ ಮಸೀದಿಯಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

You may also like

News

Saint Philomena Autonomous College IIC Unit Achieves ‘Three-Star Rating’

Puttur : The Institution’s Innovation Council (IIC) unit of Saint Philomena College, Puttur, has achieved a commendable milestone in the
News

ಉಡುಪಿ – ಕಾಸರಗೋಡು – ಕಡಂದಲೆ 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ – ಕಾಸರಗೋಡು – ಕಡಂದೆಲೆ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಕ್ರೀಡಾಕೂಟ 2025

You cannot copy content of this page