April 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಕನ್ನಡ ಭವನ ಕಾಸರಗೋಡಿನ” ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಕಾಸರಗೋಡು: ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾನ್ನಾಗಿ ಸಂಘಟಕಿ, ಲೇಖಕಿ, ಕವಯತ್ರಿ ರೇಖಾ ಸುದೇಶ್ ರಾವ್ ಇವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಭವನದ “ರಜತ ಸಂಭ್ರಮ” ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ, ಪುಸ್ತಕ ಸತ್ಯ – ಪುಸ್ತಕ ನಿತ್ಯ,” ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು ಕಾಸರಗೋಡು ಕನ್ನಡ ಭವನದ ನಿರ್ದೇಶಕ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು ಕನ್ನಡ ಭವನದ ಗೌರವ ಅಧ್ಯಕ್ಷ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು.

ಸರ್ವಾನುಮತದಿಂದ ಆಯ್ಕೆಯಾದ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ 2025” ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ   ನಿರ್ವಹಿಸ ಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಶೃದ್ಧಾಭಕ್ತಿಯಿಂದ ಶುಭ ಶುಕ್ರವಾರ ಆಚರಣೆ

ಆಧುನಿಕ ಜೀವನದಲ್ಲಿ ನಾವು ಕ್ರಿಸ್ತನಿಗೆ ಯಾವ ರೀತಿಯ ಶಿಲುಬೆಯನ್ನು ನೀಡುತ್ತೇವೆ – ಫಾದರ್ ವಿಜಯ್ ಮಚಾದೊ ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಇಂದು ಎಪ್ರಿಲ್ 18ರಂದು
News

ಯೇಸುವಿನಂತೆ ನಮ್ರತೆ ಹಾಗೂ ಪ್ರೀತಿಯಿಂದ ಸೇವೆ ಸಲ್ಲಿಸಲು ಕರೆ ನೀಡಿದ ಮಂಗಳೂರು ಬಿಷಪ್

ಇಂದು ಕಾಸರಗೋಡಿನ ಬೋವಿಕ್ಕಾನಾ ಚರ್ಚ್ ನಲ್ಲಿ ಬಿಷಪ್ ರಿಂದ ಶುಭ ಶುಕ್ರವಾರ ಹಾಗೂ ನಾಳೆ ಶನಿವಾರ ಮಂಗಳೂರಿನಲ್ಲಿರುವ ರೊಸಾರಿಯೊ ಕಥೆದ್ರಲ್ ನಲ್ಲಿ ಈಸ್ಟರ್ ಹಬ್ಬದ ಆಚರಣೆ ಪರಸ್ಪರ

You cannot copy content of this page