ರಾಷ್ಟ್ರಪತಿಯವರೊಂದಿಗೆ ಸೌಹಾರ್ದಯುತ ಭೇಟಿ ಮಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆ
ಡಿಸೆಂಬರ್ 12ರಂದು ಗುರುವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಇವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.