September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದ ಪುತ್ತೂರು ಸತ್ರ ನ್ಯಾಯಾಲಯ

ವಿಶೇಷ ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ ಪ್ರತಿಷ್ಠಿತ “ಕಜೆ ಲಾ ಛೇಂಬರ್ಸ್‌’ ಮುಖ್ಯಸ್ಥರಾದ ಖ್ಯಾತ ನ್ಯಾಯವಾದಿ ಮಹೇಶ್ ಕಜೆ

ಪುತ್ತೂರು: ನವೆಂಬರ್ 6ರ ತಡರಾತ್ರಿ ಪುತ್ತೂರಿನ ನೆಹರೂ ನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಒಂದನೇ ಮತ್ತು ಎರಡನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಎಂಬವರು ಮಾನ್ಯ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಜಾಮೀನು ಅರ್ಜಿಯ ವಿಚಾರಣೆಯ ಸುದೀರ್ಘ ವಾದ-ಪ್ರತಿದಾದ ಆಲಿಸಿದ ನ್ಯಾಯಾಧೀಶರು ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿದ್ದಾರೆ.

ದೂರುದಾರರ ಪರ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಗೊಂಡ ಪುತ್ತೂರು ಬೊಳುವಾರು ಇಲ್ಲಿನ ಪ್ರತಿಷ್ಠಿತ ‘ಕಜೆ ಲಾ ಛೇಂಬರ್ಸ್’ ಇದರ ಮುಖ್ಯಸ್ಥರಾದ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದಮಂಡಿಸಿದ್ದರು. ಇಳಂತಿಲ ಕೇದಾರ ನಿವಾಸಿಯಾಗಿರುವ ಮಹೇಶ್ ಕಜೆ ಇವರು ಜಾರಿ ನಿರ್ದೇಶನಾಲಯ (ಇ.ಡಿ.) ಪರ ವಿಶೇಷ ಸರಕಾರಿ ಅಭಿಯೋಜಕರೂ ಆಗಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page