April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇಂದಿನಿಂದ 752ನೇ ಅಜಿಲಮೊಗರು ಮಾಲಿದಾ ಉರೂಸ್

ಬಂಟ್ವಾಳ : ಇತಿಹಾಸ ಪ್ರಸಿದ್ಧ ಹಝ್ರತ್ ಸಯ್ಯಿದ್ ಬಾಬಾ ಫಕ್ರುದ್ದೀನ್ ಔಲಿಯಾ (ರ.ಅ) ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ 752ನೇ ಮಾಲಿದಾ ಉರೂಸ್ ಡಿಸೆಂಬರ್ 14ರಿಂದ ಆರಂಭಗೊಂಡಿದೆ.

ಡಿಸೆಂಬರ್ 14ರಂದು ಬೆಳಿಗ್ಗೆ 8 ರಿಂದ ರಾತ್ರಿ 11 ರ ತನಕ ಭಂಡಾರದ ಹರಕೆ, ರಾತ್ರಿ 8 ರಿಂದ 11 ರ ತನಕ ಸಯ್ಯಿದ್ ಆಟಕೋಯ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಆಧ್ಯಾತ್ಮಿಕ ಮಜ್ಲಿಸ್, ಡಿಸೆಂಬರ್ 15ರಂದು ಊರ ಹಾಗೂ ಪರವೂರ ಮಹನೀಯರ ಕೂಡುವಿಕೆಯಿಂದ ಮಾಲಿದಾ ಉರೂಸ್, ಸಂಜೆ 7 ರಿಂದ ಧಾರ್ಮಿಕ ಪ್ರವಚನ, ಡಿಸೆಂಬರ್ 16ರಂದು ಬೆಳಗ್ಗೆ 8 ರಿಂದ ಮಾಲಿದಾ ವಿತರಣೆ, ಸಂಜೆ 7 ರಿಂದ ಧಾರ್ಮಿಕ ಪ್ರವಚನ, ಡಿಸೆಂಬರ್ 17 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರ ತನಕ ಕಂದೂರಿ ಊಟ ನಡೆಯಲಿದೆ ಎಂದು ಮಸೀದಿ ಪ್ರಕಟಣೆ ತಿಳಿಸಿದೆ.

 

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page