January 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಜೀಪ ಗ್ರಾಮದ ಕಂಚಿಡ್ಕಪದವು ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿಗಳ ಧಿಡೀರ್ ಬೇಟಿ

ಬಂಟ್ವಾಳ : ಸಜೀಪ ಗ್ರಾಮದ  ಕಂಚಿನಡ್ಕ ಪದವು ಎಂಬಲ್ಲಿರುವ  ಬಂಟ್ವಾಳ ಪುರಸಭೆಯ ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ  ಮುಲೈ ಮುಗಿಲನ್‌ ಅವರು ಸ್ಥಳಕ್ಕೆ ಡಿಸೆಂಬರ್ 17ರಂದು ಮಂಗಳವಾರ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಅಸಮರ್ಪಕ ತ್ಯಾಜ್ಯ ವಿಲೇವಾರಿಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಸ್ಥಳೀಯರು ಕ್ಷೇತ್ರದ ಶಾಸಕ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ನೀಡಿದ್ದರು. ದೂರಿನನ್ವಯ ಕೂಡಲೇ ಸ್ಥಳ ಪರಿಶೀಲನೆ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ಅಸಮರ್ಪಕವಾದ ತ್ಯಾಜ್ಯ ವಿಲೇವಾರಿಯ ಬಗ್ಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಸೂಚಿಸಿದರು.

ಸಹಾಯಕ ಆಯುಕ್ತ ಹರ್ಷವರ್ದನ್‌, ಉಳ್ಳಾಲ ತಹಶಿಲ್ದಾರ್ ಪುಟ್ಟರಾಜು ಜಿಲ್ಲಾಧಿಕಾರಿಗಳ ಜೊತೆಗಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ವಕ್ಪ್‌ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಎಸ್. ಅಬೂಬಕ್ಕರ್‌ ಸಜೀಪ, ಗ್ರಾಮ ಪಂಚಾಯತ್‌ ಸದಸ್ಯರಾದ ಲತೀಫ್‌ ಬೋಳಮೆ, ಅಬ್ದುಲ್‌ ರಹಿಮಾನ್‌, ರಫೀಕ್‌ ಗೋಳಿಪಡ್ಪು, ಇಸ್ಮಾಯಿಲ್‌ ಗೋಳಿಪಡ್ಪು, ಸೋಮನಾಥ್‌ ಭಂಡಾರಿ, ಪ್ರವೀಣ್‌ ಆಳ್ವ , ಹನೀಫ್‌ ಸಜೀಪ, ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.

You may also like

News

ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಭವ್ಯ ಚಾಲನೆ

ಸಮಗ್ರ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ – ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ಆಳ್ವಾಸ್ ವಿದ್ಯಾರ್ಥಿನಿ ನಿರ್ಮಲಾ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್

You cannot copy content of this page