September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಜೀಪ ಗ್ರಾಮದ ಕಂಚಿಡ್ಕಪದವು ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿಗಳ ಧಿಡೀರ್ ಬೇಟಿ

ಬಂಟ್ವಾಳ : ಸಜೀಪ ಗ್ರಾಮದ  ಕಂಚಿನಡ್ಕ ಪದವು ಎಂಬಲ್ಲಿರುವ  ಬಂಟ್ವಾಳ ಪುರಸಭೆಯ ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ  ಮುಲೈ ಮುಗಿಲನ್‌ ಅವರು ಸ್ಥಳಕ್ಕೆ ಡಿಸೆಂಬರ್ 17ರಂದು ಮಂಗಳವಾರ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಅಸಮರ್ಪಕ ತ್ಯಾಜ್ಯ ವಿಲೇವಾರಿಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಸ್ಥಳೀಯರು ಕ್ಷೇತ್ರದ ಶಾಸಕ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ನೀಡಿದ್ದರು. ದೂರಿನನ್ವಯ ಕೂಡಲೇ ಸ್ಥಳ ಪರಿಶೀಲನೆ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ಅಸಮರ್ಪಕವಾದ ತ್ಯಾಜ್ಯ ವಿಲೇವಾರಿಯ ಬಗ್ಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಸೂಚಿಸಿದರು.

ಸಹಾಯಕ ಆಯುಕ್ತ ಹರ್ಷವರ್ದನ್‌, ಉಳ್ಳಾಲ ತಹಶಿಲ್ದಾರ್ ಪುಟ್ಟರಾಜು ಜಿಲ್ಲಾಧಿಕಾರಿಗಳ ಜೊತೆಗಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ವಕ್ಪ್‌ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಎಸ್. ಅಬೂಬಕ್ಕರ್‌ ಸಜೀಪ, ಗ್ರಾಮ ಪಂಚಾಯತ್‌ ಸದಸ್ಯರಾದ ಲತೀಫ್‌ ಬೋಳಮೆ, ಅಬ್ದುಲ್‌ ರಹಿಮಾನ್‌, ರಫೀಕ್‌ ಗೋಳಿಪಡ್ಪು, ಇಸ್ಮಾಯಿಲ್‌ ಗೋಳಿಪಡ್ಪು, ಸೋಮನಾಥ್‌ ಭಂಡಾರಿ, ಪ್ರವೀಣ್‌ ಆಳ್ವ , ಹನೀಫ್‌ ಸಜೀಪ, ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page