May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಜೀಪ ಗ್ರಾಮದ ಕಂಚಿಡ್ಕಪದವು ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿಗಳ ಧಿಡೀರ್ ಬೇಟಿ

ಬಂಟ್ವಾಳ : ಸಜೀಪ ಗ್ರಾಮದ  ಕಂಚಿನಡ್ಕ ಪದವು ಎಂಬಲ್ಲಿರುವ  ಬಂಟ್ವಾಳ ಪುರಸಭೆಯ ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ  ಮುಲೈ ಮುಗಿಲನ್‌ ಅವರು ಸ್ಥಳಕ್ಕೆ ಡಿಸೆಂಬರ್ 17ರಂದು ಮಂಗಳವಾರ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಅಸಮರ್ಪಕ ತ್ಯಾಜ್ಯ ವಿಲೇವಾರಿಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಸ್ಥಳೀಯರು ಕ್ಷೇತ್ರದ ಶಾಸಕ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ನೀಡಿದ್ದರು. ದೂರಿನನ್ವಯ ಕೂಡಲೇ ಸ್ಥಳ ಪರಿಶೀಲನೆ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ಅಸಮರ್ಪಕವಾದ ತ್ಯಾಜ್ಯ ವಿಲೇವಾರಿಯ ಬಗ್ಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಸೂಚಿಸಿದರು.

ಸಹಾಯಕ ಆಯುಕ್ತ ಹರ್ಷವರ್ದನ್‌, ಉಳ್ಳಾಲ ತಹಶಿಲ್ದಾರ್ ಪುಟ್ಟರಾಜು ಜಿಲ್ಲಾಧಿಕಾರಿಗಳ ಜೊತೆಗಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ವಕ್ಪ್‌ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಎಸ್. ಅಬೂಬಕ್ಕರ್‌ ಸಜೀಪ, ಗ್ರಾಮ ಪಂಚಾಯತ್‌ ಸದಸ್ಯರಾದ ಲತೀಫ್‌ ಬೋಳಮೆ, ಅಬ್ದುಲ್‌ ರಹಿಮಾನ್‌, ರಫೀಕ್‌ ಗೋಳಿಪಡ್ಪು, ಇಸ್ಮಾಯಿಲ್‌ ಗೋಳಿಪಡ್ಪು, ಸೋಮನಾಥ್‌ ಭಂಡಾರಿ, ಪ್ರವೀಣ್‌ ಆಳ್ವ , ಹನೀಫ್‌ ಸಜೀಪ, ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page