April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಟಿ ಚೆನ್ನಯ ಕ್ರೀಡೋತ್ಸವ ಇತಿಹಾಸ ಸೃಷ್ಟಿಸಲಿದೆ – ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ  ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು.

ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜನವರಿ 19ರಂದು ಬಂಟ್ವಾಳದ ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಮಾತಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ. ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಾಜೇಶ್ ಸುವರ್ಣ ರಾಜಲಕ್ಷ್ಮಿ, ಸುಂದರ ಪೂಜಾರಿ ಬೊಳಂಗಡಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಉಪಸ್ಥಿತರಿದ್ದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page