January 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಟಿ ಚೆನ್ನಯ ಕ್ರೀಡೋತ್ಸವ ಇತಿಹಾಸ ಸೃಷ್ಟಿಸಲಿದೆ – ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ  ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು.

ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜನವರಿ 19ರಂದು ಬಂಟ್ವಾಳದ ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಮಾತಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ. ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಾಜೇಶ್ ಸುವರ್ಣ ರಾಜಲಕ್ಷ್ಮಿ, ಸುಂದರ ಪೂಜಾರಿ ಬೊಳಂಗಡಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಉಪಸ್ಥಿತರಿದ್ದರು.

You may also like

News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ

ಮಂಗಳೂರು : ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿರುವ ಪ್ರಮುಖ ಕ್ರೀಡಾ ಕಾರ್ಯಕ್ರಮವಾದ ಕರ್ನಾಟಕ ಕ್ರೀಡಾಕೂಟ 2025
News

ಮಂಗಳೂರು ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಇ ಖಜಾನೆ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರಿನ ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಇ ಖಜಾನೆ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಜನವರಿ 17ರಂದು

You cannot copy content of this page