January 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಕರಾವಳಿ ಉತ್ಸವದಲ್ಲಿ  ಹೆಲಿಕಾಪ್ಟರ್ ಮೂಲಕ ಕರಾವಳಿ ಪ್ರದಕ್ಷಿಣೆ

ಮಂಗಳೂರು ಡಿಸೆಂಬರ್ 20: ಈ ಬಾರಿಯ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಒಬ್ಬರಿಗೆ ತಲಾ ರೂಪಾಯಿ 4500/- ವೆಚ್ಚದಲ್ಲಿ ಮಂಗಳೂರು ಪ್ರದೇಶವನ್ನು ಆಕಾಶ ಮಾರ್ಗದಲ್ಲಿ ಹೆಲಿಕಾಪ್ಟರ್  ಮೂಲಕ ಸುತ್ತ ಹಾಕಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಡಿಸೆಂಬರ್ 21ರಿಂದ 31ರವರೆಗೆ ಮೇರಿಹಿಲ್ ಹೆಲಿಪ್ಯಾಡ್ ಮೂಲಕ ಒಂದು ಬಾರಿ ಆರು ಮಂದಿ ಪ್ರಯಾಣಿಸಲು ಸಾಧ್ಯವಿರುವ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಬಹುದಾಗಿದೆ. ಈ ಕಾಪ್ಟರ್  ಮಂಗಳೂರು ಆಸುಪಾಸಿನಲ್ಲಿ ಸುಮಾರು 5ರಿಂದ 7ನಿಮಿಷಗಳ ಒಳಗೆ ಆಕಾಶದಲ್ಲಿ ಒಂದು ಪ್ರದಕ್ಷಿಣೆ ಬಂದು ಮೇರಿ ಹಿಲ್ ಗೆ ಮರಳುತ್ತದೆ.

ಮಂಗಳೂರನ್ನು ಪಕ್ಷಿ ನೋಟದಲ್ಲಿ ನೋಡುವ ಅವಕಾಶ…… ಈ ಬಾರಿಯ ಕರಾವಳಿ ಉತ್ಸವದ ವಿಶೇಷ ಆಕರ್ಷಣೆಯಾಗಿ ಮತ್ತು ಹೆಲಿಟೂರಿಸಂ ಅನ್ನು ಮಂಗಳೂರು ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮೇರಿಹಿಲ್ ಹೆಲಿಪ್ಯಾಡ್ ನಿಂದ ಇಂದು ಸಂಜೆ ಪ್ರಾಯೋಗಿಕವಾಗಿ ಪತ್ರಕರ್ತರ ಒಂದು ತಂಡ ಕ್ಯಾಪ್ಟನ್ ವಿ.ಎಸ್. ಮಲಿಕ್ ರ ನೇತೃತ್ವದಲ್ಲಿ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಒಂದು ಸುತ್ತು ನಗರ ಪ್ರದಕ್ಷಿಣೆ ಮಾಡಿದೆ.  ಮೂರು ನಿಮಿಷದಲ್ಲಿ ಮೇರಿ ಹಿಲ್ ಪಣಂಬೂರು, ಮಹಾನಗರ ಪಾಲಿಕೆ, ಪಂಪ್ ವೆಲ್ ನೇತ್ರಾವತಿ ನದಿ ಕಿನಾರೆಯ ಮೂಲಕ ಮರಳಿದೆ. ಮಂಗಳೂರು ನಗರವನ್ನು ಪಕ್ಷಿ ನೋಟದಿಂದ ನೋಡಿದಂತಾಗಿದೆ.

You may also like

News

ಉಡುಪಿ – ಕಾಸರಗೋಡು – ಕಡಂದಲೆ 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ – ಕಾಸರಗೋಡು – ಕಡಂದೆಲೆ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಕ್ರೀಡಾಕೂಟ 2025
News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ

ಮಂಗಳೂರು : ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿರುವ ಪ್ರಮುಖ ಕ್ರೀಡಾ ಕಾರ್ಯಕ್ರಮವಾದ ಕರ್ನಾಟಕ ಕ್ರೀಡಾಕೂಟ 2025

You cannot copy content of this page