September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಿಸೆಂಬರ್ 25ರಂದು ಕಿನ್ನಿಗೋಳಿಯ ಸಮೀಪದ ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಕ್ರಿಸ್ಮಸ್ ಆಚರಣೆ

ಕಿನ್ನಿಗೋಳಿ : ಇಲ್ಲಿಗೆ ಸಮೀಪದ ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಡಿಸೆಂಬರ್ 25ರಂದು ಸಂಜೆ ಸಾರ್ವಜನಿಕ ಕ್ರಿಸ್ಮಸ್ ದಿನಾಚರಣೆ, ಸನ್ಮಾನ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮವು ಇಲ್ಲಿನ ಯಕ್ಷಗಾನ ಬಯಲಾಟ ವೇದಿಕೆಯಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶೇಖರ ಪೂಜಾರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಿನ್ನಿಗೋಳಿ ಕೊಸೆಸಮ್ಮನವರ ಧರ್ಮ ಕೇಂದ್ರದ ವಂದನೀಯ ಫಾದರ್ ಜೋಕಿಂ ಫೆರ್ನಾಂಡಿಸ್, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ| ವಿಜಯ ವಿ., ಸಾಮಾಜಿಕ ಕಾರ್ಯಕರ್ತ ಮೌಶೀರ್ ಅಹ್ಮದ್ ಸಾಮನಿಗೆ ಅತಿಥಿಗಳಾಗಿ ಭಾಗವಹಿಸುವರು. ಇದೇ ವೇಳೆ ನಿವೃತ್ತ ಪೊಲೀಸ್ ಸಹಾಯಕ ಉಪ ನಿರೀಕ್ಷಕ ಮನೋಹರ್ ಹಾಗೂ ಕಿನ್ನಿಗೋಳಿ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲಿನೆಟ್ ಲೋಬೊ ಅವರನ್ನು ಸನ್ಮಾನಿಸಲಾಗುವುದು ಎಂದವರು ತಿಳಿಸಿದ್ದಾರೆ.

ಸಮಿತಿ ವತಿಯಿಂದ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರ ಒಗ್ಗೂಡುವಿಕೆಯಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿಸೆಂಬರ್ 29ರಂದು ಬೆಳಿಗ್ಗೆ ಇಲ್ಲಿನ ಅಶ್ವಥ್ಥಕಟ್ಟೆಯಲ್ಲಿ ವೇದಮೂರ್ತಿ ವಿಶ್ವೇಶ್ವರ ಭಟ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page