April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂದಾರು ಪೆರ್ಲ ಬೈಪಾಡಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

ಬೆಳ್ತಂಗಡಿ : ಜನವರಿ 7ರಿಂದ 15 ರವರೆಗೆ ನಡೆಯುವ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನದ ವಠಾರದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು ಹಾಗೂ ಕನಸಿನ ಮನೆ ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ ಇದರ ಮಾಲಕ ಮೋಹನ್ ಕುಮಾರ್ ಈ ಚಪ್ಪರ ಮುಹೂರ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ದೇವಸ್ಥಾನದ ಪ್ರಧಾನ ಅರ್ಚಕ ಅನಂತರಾಮ ಶಬರಾಯ, ಅನುವಂಶೀಯ ಆಡಳಿತ ಮೊಕ್ತೇಸರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ ಹಾರ್ತ್ಯಾರು, ಮಹಿಳಾ ಮಂಡಳಿ ಅಧ್ಯಕ್ಷ ಶ್ವೇತಾ ಹಾರ್ತ್ಯಾರು, ಚಪ್ಪರ ಸಮಿತಿ ಸಂಚಾಲಕರಾದ ಗೋಪಾಲ ಗೌಡ ಅಡ್ಡಾರು, ರಮೇಶ್ ಪೂಜಾರಿ ಹಾಗೂ ಅನೇಕ ಗಣ್ಯರ ಸಮ್ಮುಖದಲ್ಲಿ ಚಪ್ಪರ ಮುಹೂರ್ತ ನಡೆದು ಬ್ರಹ್ಮಕಲಶೋತ್ಸವದ ಅಧಿಕೃತವಾಗಿ ಪೂರ್ವ ಸಿದ್ಧತೆ ಕೆಲಸ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page