September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೋನ್ ಹೆಚ್ಚು ನೋಡಬೇಡ ಎಂದು ಹೇಳಿದ ಪೋಷಕರು – ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಮೊಬೈಲ್ ಫೋನ್ ಹೆಚ್ಚು ನೋಡಬೇಡ ಎಂದು ಪೋಷಕರು ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವತಿ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಎರಡನೇ ವರ್ಷ ಓದುತ್ತಿದ್ದ 20 ವರ್ಷ ಪ್ರಾಯದ ಧನುಶ್ರೀ ಎಂದು ತಿಳಿದು ಬಂದಿದೆ.

 

ಇವಳಾನ್ನು ಚಿಕಿತ್ಸೆಗಾಗಿ ಮೇಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಧನುಶ್ರೀ ಕಳೆದ ಮೂರು ದಿವಸಗಳ ಹಿಂದೆ ವಿಷ ಸೇವಿಸಿದ್ದಳು, ವಿಷ ಸೇವಿಸಿದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಡಿಸೆಂಬರ್ 26ರಂದು ಗುರುವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಧನುಶ್ರೀ ಮೊಬೈಲ್ ಫೋನ್ ಹೆಚ್ಚಾಗಿ ಬಳಸುತ್ತಿದ್ದ ಹಿನ್ನಲೆಯಲ್ಲಿ ಪೋಷಕರು ಮೊಬೈಲ್ ಫೋನ್‌ನ್ನು ಹೆಚ್ಚು ಬಳಸದೆ ಅಭ್ಯಾಸದ ಕಡೆ ಗಮನ ಕೊಡು ಎಂದು ಹೇಳಿದ್ದರು. ಈ ಕಾರಣಕ್ಕೆ ಯುವತಿ ವಿಷ ಸೇವಿಸಿದ್ದಳು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page