May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕವಿಗಳು ದೇಶದ ಕಾವಲುಗಾರರು – ಹೆಚ್. ಭೀಮರಾವ್ ವಾಷ್ಠರ್ ಸುಳ್ಯ

ಪುತ್ತೂರು: ಕಣ್ಣಾರೆ ಕಂಡ ವಿಷಯಗಳಿಗೆ ಮತ್ತು ಭಾವನೆಗಳಿಗೆ ಅಕ್ಷರ ರೂಪ ಕೊಡುವ ಮೂಲಕ ಕವಿಗಳು ಕ್ರಾಂತಿಕಾರಿ ಕವನಗಳನ್ನು ರಚಿಸಿ ಸಮಾಜವನ್ನು ಒಳಿತಿನ ಹಾದಿಗೆ ಸೇರಿಸುವ ದೇಶದ ಕಾವಲುಗಾರರು  ಎಂದು ಖ್ಯಾತ  ಸಾಹಿತಿ ಹೆಚ್‌. ಭೀಮರಾವ್ ವಾಷ್ಠರ್ ಸುಳ್ಯ ಹೇಳಿದ್ದಾರೆ.

ಕರ್ನಾಟಕ ಭಾವೈಕ್ಯ ಪರಿಷತ್ ವತಿಯಿಂದ ಪುತ್ತೂರು ಸುದಾನ ಮೈದಾನದಲ್ಲಿ ನಡೆದ “ಮಾದಕತೆ ಮಾರಣಾಂತಿಕ” ಪುಸ್ತಕ ಬಿಡುಗಡೆ ಅಂಗವಾಗಿ ನಡೆದ ಬಹುಭಾಷಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಾಹಿತ್ಯಕ್ಕೆ ಜನರ ಮನಸ್ಸನ್ನು ಒಗ್ಗೂಡಿಸುವ ಅಭೂತಪೂರ್ವ ಶಕ್ತಿಯಿದೆ. ಸಾಹಿತ್ಯವು ನಿರಂತರ ಹರಿಯುವ ತೊರೆಯಾಗಿದ್ದು ಇಡೀ ಜಗತ್ತು ಈ ಶುದ್ಧ ತೊರೆಯನ್ನು ಪರಿವರ್ತನೆಗಾಗಿ ಬಳಸಿ ಅಮೂಲಾಗ್ರ ಬದಲಾವಣೆ ತರಬಹುದು ಎಂದು ಅವರು ಹೇಳಿದರು.

ಕವಿಗೋಷ್ಠಿ ಸಮಾರಂಭವನ್ನು ಹವ್ಯಾಸಿ ಪತ್ರಕರ್ತ ಕೆ.ಎ. ಅಬ್ದುಲ್ ಅಝೀಝ್ ಪುಣಚ ಉದ್ಘಾಟಿಸಿದರು.  ಕೃತಿಯ ಕರ್ತೃ, ನೂರೇ ಅಜ್ಮೀರ್ ಕಾರ್ಯಕ್ರಮದ ಆಯೋಜಕ, ಕರ್ನಾಟಕ ಭಾವೈಕ್ಯ ಪರಿಷತ್ ಅಧ್ಯಕ್ಷ ಕೆ.ಎಂ. ಇಖ್ಬಾಲ್ ಬಾಳಿಲ, ಪುತ್ತೂರು ಪೋಲಿಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಪುಸ್ತಕ ಬಿಡುಗಡೆ ಸಮಿತಿ ಅಧ್ಯಕ್ಷ ಅಶ್ರಫ್ ಶಾ ಮಾಂತೂರು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕವಿಗಳಾದ ಹೃದಯ ಕವಿ ಮನ್ಸೂರ್ ಮೂಲ್ಕಿ, ನಾರಾಯಣ ರೈ ಕುಕ್ಕುವಳ್ಳಿ, ಎ. ಅಬೂಬಕರ್ ಅನಿಲಕಟ್ಟೆ, ವಿಟ್ಲ, ಡಾ| ಸುರೇಶ ನೆಗಳಗುಳಿ, ಎಂ.ಪಿ. ಬಶೀರ್ ಅಹ್ಮದ್, ಅಶ್ರಫ್ ಅಪೋಲೋ, ನಾರಾಯಣ ಕುಂಬ್ರ, ಅಬ್ದುಲ್ ಸಮದ್ ಬಾವ ಪುತ್ತೂರು, ಸಲೀಂ ಮಾಣಿ, ಎನ್.ಎಂ. ಹನೀಫ್ ನಂದರಬೆಟ್ಟು, ಝುನೈಫ್ ಕೋಲ್ಪೆ ಶಂಶೀರ್ ಬುಡೋಳಿ, ಎಂ.ಎ. ಮುಸ್ತಫಾ ಬೆಳ್ಳಾರೆ‌ ಮೊದಲಾದವರು ಕವನ ವಾಚನ ಮಾಡಿದರು. ಬಹುಭಾಷಾ ಕವಿಗೋಷ್ಠಿಯಲ್ಲಿ ವಿವಿಧ ಭಾಷೆಗಳ ಕವನಗಳು ಜನರ ಮನಸೂರೆಗೊಂಡವು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಎ. ಅಬೂಬಕರ್ ಅನಿಲಕಟ್ಟೆ ಸ್ವಾಗತ ಭಾಷಣ ಮಾಡಿದರು. ಪತ್ರಕರ್ತ ಶಂಶೀರ್ ಬುಡೋಳಿ ಕಾರ್ಯಕ್ರಮ ನಿರೂಪಿಸಿದರು. ಕೆ.ಎಂ. ಇಖ್ಬಾಲ್ ಬಾಳಿಲ ಕೃತಜ್ಞತೆ ಸಲ್ಲಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page