May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡು ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ರಿಯಾಜ್, ಯಾಸೀನ್ ಮತ್ತು ಸಮದ್ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು

ಕಾಸರಗೋಡು: ನಗರದ ಸಮೀಪ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಎರಿಂಜಿಪುಳ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ. ಸಿದ್ದೀಕ್ ಅವರ ಪುತ್ರ 17 ವರ್ಷ ಪ್ರಾಯದ ರಿಯಾಜ್ ಅಶ್ರಫ್ ಅವರ ಪುತ್ರ 13 ವರ್ಷ ಪ್ರಾಯದ ಯಾಸೀನ್ ಮತ್ತು ಮಜೀದ್ ಅವರ ಪುತ್ರ 13 ವರ್ಷ ಪ್ರಾಯದ ಸಮದ್ ಮೃತ ವಿದ್ಯಾರ್ಥಿಗಳು ಎಂದು ತಿಳಿಯಲಾಗಿದೆ.

ಮಂಜೇಶ್ವರದಲ್ಲಿ ಪಿಯುಸಿ ಓದುತ್ತಿರುವ ರಿಯಾಝ್ ಶುಕ್ರವಾರ ಎರಿಂಜಿಪುಳ ಬಳಿಯ ತನ್ನ ಪೂರ್ವಜರ ಮನೆಗೆ ಬಂದಿದ್ದು, ಮೂವರು ಮಕ್ಕಳು ಮಧ್ಯಾಹ್ನ ತಮ್ಮ ಮನೆಯ ಸಮೀಪ ಇರುವ ಪಯಸ್ವಿನಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಸಂದರ್ಭ ಈ ದುರಂತ ಸಂಭವಿಸಿದೆ. ಕಾಸರಗೋಡು ಮತ್ತು ಕುಟ್ಟಿಕೋಲ್ ನ ಅಗ್ನಿಶಾಮಕ ಮತ್ತು ಸ್ಕೂಬಾ ತಂಡಗಳ ಶೋಧಕಾರ್ಯದಿಂದ ಮೂವರ ಬಾಲಕರ ಮೃತ ದೇಹ ಪತ್ತೆಯಾಗಿದೆ. ಮೃತದೇಹವನ್ನು ಚೆರ್ಕಳ ಕೆ.ಕೆ. ಪುರಂ ಹೊರವಲಯದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page