May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡು ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ರಿಯಾಜ್, ಯಾಸೀನ್ ಮತ್ತು ಸಮದ್ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು

ಕಾಸರಗೋಡು: ನಗರದ ಸಮೀಪ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಎರಿಂಜಿಪುಳ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ. ಸಿದ್ದೀಕ್ ಅವರ ಪುತ್ರ 17 ವರ್ಷ ಪ್ರಾಯದ ರಿಯಾಜ್ ಅಶ್ರಫ್ ಅವರ ಪುತ್ರ 13 ವರ್ಷ ಪ್ರಾಯದ ಯಾಸೀನ್ ಮತ್ತು ಮಜೀದ್ ಅವರ ಪುತ್ರ 13 ವರ್ಷ ಪ್ರಾಯದ ಸಮದ್ ಮೃತ ವಿದ್ಯಾರ್ಥಿಗಳು ಎಂದು ತಿಳಿಯಲಾಗಿದೆ.

ಮಂಜೇಶ್ವರದಲ್ಲಿ ಪಿಯುಸಿ ಓದುತ್ತಿರುವ ರಿಯಾಝ್ ಶುಕ್ರವಾರ ಎರಿಂಜಿಪುಳ ಬಳಿಯ ತನ್ನ ಪೂರ್ವಜರ ಮನೆಗೆ ಬಂದಿದ್ದು, ಮೂವರು ಮಕ್ಕಳು ಮಧ್ಯಾಹ್ನ ತಮ್ಮ ಮನೆಯ ಸಮೀಪ ಇರುವ ಪಯಸ್ವಿನಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಸಂದರ್ಭ ಈ ದುರಂತ ಸಂಭವಿಸಿದೆ. ಕಾಸರಗೋಡು ಮತ್ತು ಕುಟ್ಟಿಕೋಲ್ ನ ಅಗ್ನಿಶಾಮಕ ಮತ್ತು ಸ್ಕೂಬಾ ತಂಡಗಳ ಶೋಧಕಾರ್ಯದಿಂದ ಮೂವರ ಬಾಲಕರ ಮೃತ ದೇಹ ಪತ್ತೆಯಾಗಿದೆ. ಮೃತದೇಹವನ್ನು ಚೆರ್ಕಳ ಕೆ.ಕೆ. ಪುರಂ ಹೊರವಲಯದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page