September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡು ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ರಿಯಾಜ್, ಯಾಸೀನ್ ಮತ್ತು ಸಮದ್ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು

ಕಾಸರಗೋಡು: ನಗರದ ಸಮೀಪ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಎರಿಂಜಿಪುಳ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ. ಸಿದ್ದೀಕ್ ಅವರ ಪುತ್ರ 17 ವರ್ಷ ಪ್ರಾಯದ ರಿಯಾಜ್ ಅಶ್ರಫ್ ಅವರ ಪುತ್ರ 13 ವರ್ಷ ಪ್ರಾಯದ ಯಾಸೀನ್ ಮತ್ತು ಮಜೀದ್ ಅವರ ಪುತ್ರ 13 ವರ್ಷ ಪ್ರಾಯದ ಸಮದ್ ಮೃತ ವಿದ್ಯಾರ್ಥಿಗಳು ಎಂದು ತಿಳಿಯಲಾಗಿದೆ.

ಮಂಜೇಶ್ವರದಲ್ಲಿ ಪಿಯುಸಿ ಓದುತ್ತಿರುವ ರಿಯಾಝ್ ಶುಕ್ರವಾರ ಎರಿಂಜಿಪುಳ ಬಳಿಯ ತನ್ನ ಪೂರ್ವಜರ ಮನೆಗೆ ಬಂದಿದ್ದು, ಮೂವರು ಮಕ್ಕಳು ಮಧ್ಯಾಹ್ನ ತಮ್ಮ ಮನೆಯ ಸಮೀಪ ಇರುವ ಪಯಸ್ವಿನಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಸಂದರ್ಭ ಈ ದುರಂತ ಸಂಭವಿಸಿದೆ. ಕಾಸರಗೋಡು ಮತ್ತು ಕುಟ್ಟಿಕೋಲ್ ನ ಅಗ್ನಿಶಾಮಕ ಮತ್ತು ಸ್ಕೂಬಾ ತಂಡಗಳ ಶೋಧಕಾರ್ಯದಿಂದ ಮೂವರ ಬಾಲಕರ ಮೃತ ದೇಹ ಪತ್ತೆಯಾಗಿದೆ. ಮೃತದೇಹವನ್ನು ಚೆರ್ಕಳ ಕೆ.ಕೆ. ಪುರಂ ಹೊರವಲಯದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ

You cannot copy content of this page