May 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಾಮೀನಿಗಾಗಿ ಹೈಕೋರ್ಟ್‌ ನ್ಯಾಯಮೂರ್ತಿಗಳ ಹೆಸರು ದುರ್ಬಳಕೆ

ಜಡ್ಜ್ 50 ಲಕ್ಷ ರೂಪಾಯಿ ಲಂಚ ಕೇಳಿದ್ದಾರೆಂದ ಮಹಿಳಾ ವಕೀಲರ ವಿರುದ್ಧ ವಂಚನೆ ಕೇಸು

ವಕಲಾತ್ತು ರದ್ದುಪಡಿಸಲು ಬಾರ್ ಕೌನ್ಸಿಲ್‌ಗೂ ಸೂಚನೆ

ಆರೋಪಿಯೊಬ್ಬರ ಬಿಡುಗಡೆಗೆ ಜಾಮೀನು ಮಂಜೂರು ಮಾಡಬೇಕಿದ್ದರೆ ಹೈಕೋರ್ಟ್‌ ಜಡ್ಜ್‌ 50 ಲಕ್ಷ ರೂಪಾಯಿ ಲಂಚ ಕೇಳಿದ್ದಾರೆಂದ ಮಹಿಳಾ ವಕೀಲರ ವಿರುದ್ಧ ವಂಚನೆ ಕೇಸು ದಾಖಲಾಗಿದೆ. ನ್ಯಾಯಮೂರ್ತಿ ಹೆಸರು ದುರ್ಬಳಕೆ ಮಾಡಿದ ಹಾಗೂ ಇತರ ಆರೋಪದ ಮೇಲೆ ಮಹಿಳಾ ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಆರೋಪಿ ವಕೀಲರ ವಕಲಾತ್ತು ರದ್ದುಪಡಿಸಲು ಹೈಕೋರ್ಟ್‌ ಬಾರ್ ಕೌನ್ಸಿಲ್‌ಗೂ ಸೂಚನೆ ನೀಡಿದೆ.

ಕೊಲೆ ಪ್ರಕರಣದಲ್ಲಿ ಒಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿ ಇರುವ ಆರೋಪಿಗೆ ಜಾಮೀನು ಮಂಜೂರು ಮಾಡಲು ನ್ಯಾಯಮೂರ್ತಿಗಳು 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂದು ಕೊಲೆ ಆರೋಪಿ ವಿಷ್ಣುದೇವನ್ ಅವರ ತಾಯಿ ತೆರೆಸಾ ಅವರಿಗೆ ವಕೀಲೆ ದಯೀನಾ ಬಾನು ಹೇಳಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಜಾಮೀನು ನಿರೀಕ್ಷೆಯಲ್ಲಿ ಇರುವ ಬಂಧಿತನ ತಾಯಿ ತೆರೆಸಾ ಅವರು ಮಹಿಳಾ ವಕೀಲರಾದ ಬಿ.ಎಂ. ದಯೀನಾ ಬಾನು ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟಿನ ರಿಜಿಸ್ಟರ್ ಜನರಲ್ ಅವರಿಗೆ ತೆರೆಸಾ ದೂರು ನೀಡಿದ್ದರು. ಜಾಮೀನು ಕೋರಿರುವ ಅರ್ಜಿಯ ದಾಖಲೆ ಪಡೆದು ದಯೀನಾ ಬಾನು ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನ್ಯಾಯಮೂರ್ತಿಗಳು ಆದೇಶ ನೀಡಿದ್ದರು. ಇದರ ಬೆನ್ನಿಗೆ ದಯೀನಾ ಬಾನು ವಿರುದ್ಧ ಮುಂದಿನ ಕ್ರಮಕ್ಕಾಗಿ ಹೈಕೋರ್ಟಿನ ಕಾನೂನು ಘಟಕದ ಜಂಟಿ ರಿಜಿಸ್ಟರ್ ಎಂ. ರಾಜೇಶ್ವರಿ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318(4)ರ ಅಡಿಯಲ್ಲಿ ವಿಧಾನಸೌಧ ಪೊಲೀಸರು ವಕೀಲರಾದ ದಯೀನಾ ಬಾನು ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

ತೆರೆಸ ಅವರ ಪುತ್ರ 24 ವರ್ಷದ ವಿಷ್ಣುದೇವನ್ ಕೊಲೆ ಪ್ರಕರಣದ ಆರೋಪದಲ್ಲಿ 3 ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಜಾಮೀನು ಕೊಡಿಸುವುದಾಗಿ ಹೇಳಿದ ವಕೀಲರಾದ ಮರೀನಾ ಫೆರ್ನಾಂಡಿಸ್ 10 ಲಕ್ಷ ರೂಪಾಯಿ ಪಡೆದುಕೊಂಡಿದ್ದರು. ಜಾಮೀನು ಅರ್ಜಿ ತಿರಸ್ಕೃತಗೊಂಡ ಕಾರಣದಿಂದ ಹಣ ಹಿಂತಿರುಗಿಸುವಂತೆ ಮರೀನಾ ಫೆರ್ನಾಂಡಿಸ್ ಅವರನ್ನು ತೆರೆಸಾ ಅವರು ಕೇಳಿದ್ದರು. ವಕೀಲರಾದ ಮರೀನಾ ತಲಾ ಮೂರು ಲಕ್ಷ ರೂಪಾಯಿಗಳ ಚೆಕ್‌ನ್ನು ನೀಡಿದ್ದರು. ಆದರೆ, ಹಣ ಹಿಂತಿರುಗಿಸಲಿಲ್ಲ ಎಂದು ತೆರೆಸಾ ಹೇಳಿದ್ಧಾರೆ.

ಬಳಿಕ, ಆರತಿ ಎಂಬಾಕೆಯನ್ನು ಮರೀನಾ ಫೆರ್ನಾಂಡಿಸ್ ಪರಿಚಯಿಸಿದರು. ಆಕೆಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಪರಿಚಯವಿದೆ ಎಂದು ಹೇಳಿಕೊಂಡು 72 ಸಾವಿರ ರೂಪಾಯಿಗಳನ್ನು ಆರತಿ ಪಡೆದುಕೊಂಡಿದ್ದರು. ದಯೀನಾ ಬಾನು ಅವರು ನ್ಯಾಯಮೂರ್ತಿಗಳು 50 ಲಕ್ಷ ರೂಪಾಯಿಗಳನ್ನು ನಿರೀಕ್ಷೆ ಮಾಡಿಸಿದ್ದಾರೆ. ಇಲ್ಲದಿದ್ದಲ್ಲಿ ಜಾಮೀನು ಪ್ರಕ್ರಿಯೆಯನ್ನು ಬೇರೆ ವಕೀಲರಲ್ಲಿ ಮಾಡಿಸಿಕೊಳ್ಳುವಂತೆ ಸೂಚಿಸಿದ್ದರು ಎಂದು ತೆರೆಸಾ ತಾನು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

You may also like

News

ವಾಹನದಲ್ಲಿ ವಕೀಲೇತರರು “ವಕೀಲರ ಚಿಹ್ನೆ” ಸ್ಟಿಕ್ಕರ್ ಬಳಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಅಕ್ರಮದ ವಿರುದ್ಧ ಮಾಹಿತಿ ನೀಡುವಂತೆ ವಕೀಲರ ಪರಿಷತ್‌ ಮನವಿ ವಕೀಲರಲ್ಲದವರೂ ತಮ್ಮ ಖಾಸಗಿ ಯಾ ವಾಣಿಜ್ಯ ವಾಹನಗಳಲ್ಲಿ “ವಕೀಲರ ಚಿಹ್ನೆ” ಸ್ಟಿಕ್ಕರ್ ಬಳಸುತ್ತಿರುವುದು ನಮ್ಮ ಗಮನಕ್ಕೆ ಬಂದರೆ,
News

ಮೊಗರ್ನಾಡ್ ಚರ್ಚ್ ನಲ್ಲಿ ಪ್ರಥಮ ಪರಮ ಪ್ರಸಾದದ ಸಂಭ್ರಮ

ದೇವಮಾತೆಗೆ ಸಮರ್ಪಿಸಿದ ಮೊಗರ್ನಾಡ್ ಧರ್ಮಕೇಂದ್ರದವು 250ನೇ ಜ್ಯುಬಿಲಿ ಆಚರಿಸುವ ಸಂದರ್ಭದಲ್ಲಿ ಮೇ 11ರಂದು ಆದಿತ್ಯವಾರ ದೇವಾಲಯದ ವ್ಯಾಪ್ತಿಗೆ ಒಳಪಟ್ಟ 26 ಪುಟ್ಟ ಮಕ್ಕಳು ತಮ್ಮ ಜೀವಿತದಲ್ಲಿ ಮೊದಲ

You cannot copy content of this page