January 14, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಬೈಂದೂರು ತಹಸೀಲ್ದಾರ್ ಹಾಗೂ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಪ್ರಸ್ತುತ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಹಾಕಿದ ರೈತರು ಹಾಗೂ ಸರಕಾರಿ ಜಾಗದಲ್ಲಿ ವಾಸ್ತವ್ಯದ ಉದ್ದೇಶಕ್ಕಾಗಿ ಮನೆ ಕಟ್ಟಿಕೊಂಡ ಬಡವರ ಹಲವಾರು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಈವರೆಗೂ ಹಕ್ಕು ಪತ್ರ ದೊರಕದೇ ಇರುವ ಸಮಸ್ಯೇತರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಜನವರಿ 2ನೇ ವಾರದಲ್ಲಿ ಕಡತ ವಿಲೇವಾರಿ ಸಪ್ತಾಹ ಆಯೋಜಿಸಲು ಸೂಚನೆ ನೀಡಿದರು.

ಬಾಕಿ ಇರುವ ಶೂನ್ಯ ಸಮಸ್ಯಾತ್ಮಕ ಎಲ್ಲಾ ಅರ್ಹ ಕಡತಗಳನ್ನು ವಿಲೇವಾರಿ ಮಾಡಿ ಹಕ್ಕುಪತ್ರ ಒದಗಿಸಲು ಕ್ರಮ ವಹಿಸಲು ಹಾಗೂ ಜನವರಿ ತಿಂಗಳ ಅಂತ್ಯದೊಳಗೆ ಎಲ್ಲಾ ಸಮಸ್ಯೇತರ ಕಡತಗಳನ್ನು ವಿಲೇವಾರಿ ಮಾಡಿ ರೈತರಿಗೆ ಹಕ್ಕು ಪತ್ರ ಒದಗಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಲ್ಲದೆ, ಜನವರಿ ಅಂತ್ಯಕ್ಕೆ ಸಮಸ್ಯಾತ್ಮಕವಲ್ಲದ ಯಾವುದೇ ಕಡತಗಳು ಬಾಕಿ ಉಳಿಯದಂತೆ ಕಂದಾಯ ಇಲಾಖೆಯ ಎಲ್ಲಾ ಸ್ತರದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸ್ಪಷ್ಟವಾಗಿ ಮೌಖಿಕ ಆದೇಶ ನೀಡಿದ್ದಾರೆ.

ಸಭೆಯಲ್ಲಿ ಉಪ ತಹಸೀಲ್ದಾರ್, ಕಂದಾಯ ನಿರೀಕ್ಷಕರು, ವಿಷಯ ನಿರ್ವಾಹಕರು ಹಾಗೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

You may also like

News

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತ್ರತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಬೆಳ್ತಂಗಡಿ : ಉಜಿರೆ ಬೆನಕ ಆಸ್ಪತ್ರೆಗೆ ಜನವರಿ 13ರಂದು ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ
News

ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಕೇರಳ ಗಡಿನಾಡ ಘಟಕವಾದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದು

You cannot copy content of this page