May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಬೆಂಗಳೂರು: ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದು ಘೋಷಿಸಲಾಗಿದೆ. ಆಸ್ತಿ ವಿವರ ನೀಡುವಂತೆ ಈ ಸದಸ್ಯರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಯಾವುದೇ ಉತ್ತರ ನೀಡದ ಕಾರಣ ಸದಸ್ಯತ್ವ ರದ್ದು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಅತ್ತಿಕೂಡಿಗೆ ಗ್ರಾಮ ಪಂಚಾಯತ್ ನ ಚೈತ್ರ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯತ್ ನ ಎಸ್.ಹೆಚ್. ಚಂದ್ರಶೇಖರ, ಕಲಬುರಗಿ ಜಿಲ್ಲೆ ಆಳಂದ ತಾಲೂಕು ಅಳಂಗಾ ಗ್ರಾಮ ಪಂಚಾಯತ್ ನ ಗಣಪತಿ, ಕಮಲಾಪುರ ತಾಲೂಕು ವಿ.ಕೆ. ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಖಾನ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ, ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಗ್ರಾಮ ಪಂಚಾಯತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ ಆಸ್ತಿ ಘೋಷಣೆ ಮಾಡಿಕೊಳ್ಳದ ಸದಸ್ಯರ ಸದಸ್ಯತ್ವ ರದ್ದತಿಗೆ ಅವಕಾಶವಿದ್ದು, ಈ ಕಾಯ್ದೆ ಬಳಸಿಕೊಂಡು ರಾಜ್ಯ ಚುನಾವಣಾ ಆಯೋಗ 6 ಮಂದಿ ಸದಸ್ಯರನ್ನು ಅನರ್ಹಗೊಳಿಸಿದೆ. ಈ ಸದಸ್ಯ ಸ್ಥಾನಗಳು ಖಾಲಿ ಎಂದು ಘೋಷಣೆ ಮಾಡಲಾಗಿದೆ.

 

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page