January 13, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಬೆಂಗಳೂರು: ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದು ಘೋಷಿಸಲಾಗಿದೆ. ಆಸ್ತಿ ವಿವರ ನೀಡುವಂತೆ ಈ ಸದಸ್ಯರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಯಾವುದೇ ಉತ್ತರ ನೀಡದ ಕಾರಣ ಸದಸ್ಯತ್ವ ರದ್ದು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಅತ್ತಿಕೂಡಿಗೆ ಗ್ರಾಮ ಪಂಚಾಯತ್ ನ ಚೈತ್ರ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯತ್ ನ ಎಸ್.ಹೆಚ್. ಚಂದ್ರಶೇಖರ, ಕಲಬುರಗಿ ಜಿಲ್ಲೆ ಆಳಂದ ತಾಲೂಕು ಅಳಂಗಾ ಗ್ರಾಮ ಪಂಚಾಯತ್ ನ ಗಣಪತಿ, ಕಮಲಾಪುರ ತಾಲೂಕು ವಿ.ಕೆ. ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಖಾನ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ, ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಗ್ರಾಮ ಪಂಚಾಯತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ ಆಸ್ತಿ ಘೋಷಣೆ ಮಾಡಿಕೊಳ್ಳದ ಸದಸ್ಯರ ಸದಸ್ಯತ್ವ ರದ್ದತಿಗೆ ಅವಕಾಶವಿದ್ದು, ಈ ಕಾಯ್ದೆ ಬಳಸಿಕೊಂಡು ರಾಜ್ಯ ಚುನಾವಣಾ ಆಯೋಗ 6 ಮಂದಿ ಸದಸ್ಯರನ್ನು ಅನರ್ಹಗೊಳಿಸಿದೆ. ಈ ಸದಸ್ಯ ಸ್ಥಾನಗಳು ಖಾಲಿ ಎಂದು ಘೋಷಣೆ ಮಾಡಲಾಗಿದೆ.

 

You may also like

News

ಕಥೊಲಿಕ್ ಸಭಾ ಶಂಭೂರು ಘಟಕದ ಬೆಳ್ಳಿಹಬ್ಬ ಸಂಭ್ರಮದಿಂದ ಆಚರಣೆ

ಸೇವೆ, ತ್ಯಾಗ ಮತ್ತು ಒಗ್ಗಟ್ಟು ಶಂಭೂರು ಚರ್ಚ್ ನಲ್ಲಿ ಎದ್ದು ಕಾಣುತ್ತಿದೆ  – ಅತೀ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳೂರು ಧರ್ಮಕ್ಷೇತ್ರದ ಸೈಂಟ್ ಜೋನ್
News

ಪೋಪ್ ಫ್ರಾನ್ಸಿಸ್‍ರವರಿಗೆ `ಮೆಡಲ್ ಆಫ್ ಫ್ರೀಡಂ’ ಗೌರವ ನೀಡಿದ ಅಮೆರಿಕದ ನಿರ್ಗಮಿತ ಅಧ್ಯಕ್ಷ ಬೈಡನ್

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಜನವರಿ 11ರಂದು ಶನಿವಾರ ಫೋನ್ ಕರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಅಧ್ಯಕ್ಷೀಯ `ಸ್ವಾತಂತ್ರ್ಯ ಪದಕ’ ಪ್ರದಾನ ಮಾಡಿದರು ಎಂದು

You cannot copy content of this page