ಕಳೆಂಜ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದ – ಡಿ. ಹರ್ಷೇಂದ್ರ ಕುಮಾರ್
ಕಳೆಂಜ : ಗ್ರಾಮದ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಜನವರಿ 20ರಿಂದ 23 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಜನವರಿ 2ರಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಅಧ್ಯಕ್ಷ ಡಿ. ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಗರ್ಭ ಗುಡಿಯ ಕೆಲಸದ ಬಗ್ಗೆ ಹಾಗೂ ಅಭಿವೃದ್ಧಿಯ ಬಗ್ಗೆ ದರ್ಶನವನ್ನು ನೀಡಿದರು.
ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಶ್ರೀಧರ್ ರಾವ್ ಕಾಯಡ, ಬ್ರಹ್ಮಕಲಶೋತ್ಸವದ ಸಮಿತಿಯ ಸಂಚಾಲಕ ಚಂದ್ರಶೇಖರ ಕೆ. ನಿಡ್ಲೆ, ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲ್, ಕೇಶವ ಗೌಡ ಬರಮೇಲು ದರ್ಖಾಸು, ಕೊರಗಪ್ಪ ಗೌಡ ನಿಡ್ಲೆ, ಬಾಲಕೃಷ್ಣ ಬರಮೇಲು, ಬಾಲಕೃಷ್ಣ ದೇವಾಡಿಗ, ನೀಲಯ್ಯ ಗೌಡ, ರಾಮಚಂದ್ರ ಗೌಡ, ರಘುಚಂದ್ರ ಪೂಜಾರಿ, ರುಕ್ಮಯ್ಯ ಗೌಡ ಬರಮೇಲು, ವಸಂತ ಪೂಜಾರಿ, ದೇವಪ್ಪ ಪೂಜಾರಿ, ರಮ್ಯಾ ಮಲ್ಲಜಾಲ್, ಶೋಭಾ ನಾಯೆರ್ ಮಾರ್, ವಿನೋದ, ದಿವ್ಯ ಉಷಾ ಹಾಗೂ ಗೀತಾ ಉಪಸ್ಥಿತರಿದ್ದರು.