April 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ. ತುಂಬೆ ಮೊಯ್ದಿನ್ ಅವರಿಗೆ ಬಂಟ್ವಾಳ ಜಮೀಯ್ಯತುಲ್ ಫಲಾಹ್ ನಿಂದ ಗೌರವಾರ್ಪಣೆ

ವಿದೇಶದ ನೆಲದಲ್ಲಿ ಶೈಕ್ಷಣಿಕ ಕ್ರಾಂತಿ ಮೂಡಿಸಿರುವ ಗಲ್ಫ್ ಮೆಡಿಕಲ್ ಕಾಲೇಜ್ ತುಂಬೆ ಯುನಿವರ್ಸಿಟಿಯ ಜನಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ತುಂಬೆ ಮೊಯ್ದಿನ್ ಅವರನ್ನು ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ಜನವರಿ 4ರಂದು ಶನಿವಾರ ತುಂಬೆ ಹಿಲ್ಸ್ ನಲ್ಲಿ ಗೌರವಿಸಲಾಯಿತು.

ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಘಟಕದ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷರಾಗಿರುವ ಕೆ.ಕೆ. ಶಾಹುಲ್ ಹಮೀದ್ ಅಭಿನಂದನಾ ಮಾತುಗಳನ್ನಾಡಿದರು. ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಹಾಗೂ ಯಾಸೀರ್ ಕಲ್ಲಡ್ಕ ಮ್ಯೂಸಿಯಂ ಅವರನ್ನು ಸನ್ಮಾನಿಸಲಾಯಿತು. ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್, ಸದಸ್ಯರಾದ ಮಹಮ್ಮದ್ ವಳವೂರು, ಆಶಿಕ್ ಕುಕ್ಕಾಜೆ, ಪುತ್ತುಬಾವ ಮಹಮೂದ್ ಹಾಜಿ ಉಪಸ್ಥಿತರಿದ್ದರು.

You may also like

News

ಶೈಕ್ಷಣಿಕ ಲೋಕದ ಧ್ರುವತಾರೆ ಅಸ್ತಂಗತ: ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಫಾದರ್ ಮೆಲ್ವಿನ್ ಜೆ. ಪಿಂಟೊ ನಿಧನ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾಚ್, MLC ಐವನ್ ಡಿಸೋಜ ಹಾಗೂ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಸಂತಾಪ ಮಂಗಳೂರಿನ ಪ್ರತಿಷ್ಠಿತ ಸಂ ಸೈಂಟ್ ಅಲೋಶಿಯಸ್
News

ಕೋಮು ಸೌಹಾರ್ದತೆಯ ‘ರಾಜಮಾರ್ಗ’ – ಕಟ್ಟತ್ತಿಲ ದರ್ಗಾ-ಮಠದ ಸಂಪರ್ಕ ರಸ್ತೆ ಈಗ ಡಾಮರುಮಯ

ಧಾರ್ಮಿಕ ಸಾಮರಸ್ಯಕ್ಕೆ ಹೆಸರುವಾಸಿಯಾದ ಕಟ್ಟತ್ತಿಲದ ದರ್ಗಾ ಮತ್ತು ಮಠವನ್ನು ಬೆಸೆಯುವ ಪ್ರಮುಖ ಸಂಪರ್ಕ ರಸ್ತೆಯು ಈಗ ನವವಧುವಿನಂತೆ ಕಂಗೊಳಿಸುತ್ತಿದೆ. ಬಹುಕಾಲದ ಬೇಡಿಕೆಯಾಗಿದ್ದ ಈ ರಸ್ತೆಯ ಡಾಮರೀಕರಣ ಕಾಮಗಾರಿ

You cannot copy content of this page