September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ. ತುಂಬೆ ಮೊಯ್ದಿನ್ ಅವರಿಗೆ ಬಂಟ್ವಾಳ ಜಮೀಯ್ಯತುಲ್ ಫಲಾಹ್ ನಿಂದ ಗೌರವಾರ್ಪಣೆ

ವಿದೇಶದ ನೆಲದಲ್ಲಿ ಶೈಕ್ಷಣಿಕ ಕ್ರಾಂತಿ ಮೂಡಿಸಿರುವ ಗಲ್ಫ್ ಮೆಡಿಕಲ್ ಕಾಲೇಜ್ ತುಂಬೆ ಯುನಿವರ್ಸಿಟಿಯ ಜನಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ತುಂಬೆ ಮೊಯ್ದಿನ್ ಅವರನ್ನು ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ಜನವರಿ 4ರಂದು ಶನಿವಾರ ತುಂಬೆ ಹಿಲ್ಸ್ ನಲ್ಲಿ ಗೌರವಿಸಲಾಯಿತು.

ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಘಟಕದ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷರಾಗಿರುವ ಕೆ.ಕೆ. ಶಾಹುಲ್ ಹಮೀದ್ ಅಭಿನಂದನಾ ಮಾತುಗಳನ್ನಾಡಿದರು. ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಹಾಗೂ ಯಾಸೀರ್ ಕಲ್ಲಡ್ಕ ಮ್ಯೂಸಿಯಂ ಅವರನ್ನು ಸನ್ಮಾನಿಸಲಾಯಿತು. ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್, ಸದಸ್ಯರಾದ ಮಹಮ್ಮದ್ ವಳವೂರು, ಆಶಿಕ್ ಕುಕ್ಕಾಜೆ, ಪುತ್ತುಬಾವ ಮಹಮೂದ್ ಹಾಜಿ ಉಪಸ್ಥಿತರಿದ್ದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page