May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ರಕರ್ತನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಅರಣ್ಯ ಅಧಿಕಾರಿಯ ಬಂಧನ

 

ಛತ್ತೀಸ್ ಗಢದ ಧಮ್ತಾರಿ ಜಿಲ್ಲೆಯ ಅರಣ್ಯ ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅರಣ್ಯ ಅಧಿಕಾರಿಯನ್ನು ಜನವರಿ 5ರಂದು ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾದೇಶಿಕ ಸುದ್ದಿ ವಾಹಿನಿಯ ವರದಿಗಾರ ಸಂದೀಪ್ ಶುಕ್ಲಾ ನೀಡಿದ ದೂರಿನ ಮೇರೆಗೆ ಸೀತಾನದಿ ಅರಣ್ಯ ವಲಯದ ವಲಯ ಅಧಿಕಾರಿ ನರೇಶ್ಚಂದ್ರ ಡಿಯೋನಾಗ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉದಂತಿ ಸೀತಾನದಿ ಹುಲಿ ಮೀಸಲು ಪ್ರದೇಶದ ಅಡಿಯಲ್ಲಿ ಸೀತಾನದಿ ವಲಯವು ರಾಜ್ಯದ ಧಮ್ತಾರಿ ಮತ್ತು ಗರಿಯಾಬಂದ್ ಜಿಲ್ಲೆಗಳಲ್ಲಿ ವ್ಯಾಪಿಸಿದೆ. ರಾಯ್ಪುರ ಮೂಲದ ಶುಕ್ಲಾ ಅವರು ಜನವರಿ 1ರಂದು ಅರಣ್ಯ ಚೆಕ್ ಪೋಸ್ಟ್ ಗೆ ಸಂಬಂಧಿಸಿದ ಸುದ್ದಿಯನ್ನು ವರದಿ ಮಾಡಲು ಧಮ್ತಾರಿ ಜಿಲ್ಲೆಯ ಬೊರೈ ಗ್ರಾಮಕ್ಕೆ ಹೋಗಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page