May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ರಕರ್ತನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಅರಣ್ಯ ಅಧಿಕಾರಿಯ ಬಂಧನ

 

ಛತ್ತೀಸ್ ಗಢದ ಧಮ್ತಾರಿ ಜಿಲ್ಲೆಯ ಅರಣ್ಯ ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅರಣ್ಯ ಅಧಿಕಾರಿಯನ್ನು ಜನವರಿ 5ರಂದು ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾದೇಶಿಕ ಸುದ್ದಿ ವಾಹಿನಿಯ ವರದಿಗಾರ ಸಂದೀಪ್ ಶುಕ್ಲಾ ನೀಡಿದ ದೂರಿನ ಮೇರೆಗೆ ಸೀತಾನದಿ ಅರಣ್ಯ ವಲಯದ ವಲಯ ಅಧಿಕಾರಿ ನರೇಶ್ಚಂದ್ರ ಡಿಯೋನಾಗ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉದಂತಿ ಸೀತಾನದಿ ಹುಲಿ ಮೀಸಲು ಪ್ರದೇಶದ ಅಡಿಯಲ್ಲಿ ಸೀತಾನದಿ ವಲಯವು ರಾಜ್ಯದ ಧಮ್ತಾರಿ ಮತ್ತು ಗರಿಯಾಬಂದ್ ಜಿಲ್ಲೆಗಳಲ್ಲಿ ವ್ಯಾಪಿಸಿದೆ. ರಾಯ್ಪುರ ಮೂಲದ ಶುಕ್ಲಾ ಅವರು ಜನವರಿ 1ರಂದು ಅರಣ್ಯ ಚೆಕ್ ಪೋಸ್ಟ್ ಗೆ ಸಂಬಂಧಿಸಿದ ಸುದ್ದಿಯನ್ನು ವರದಿ ಮಾಡಲು ಧಮ್ತಾರಿ ಜಿಲ್ಲೆಯ ಬೊರೈ ಗ್ರಾಮಕ್ಕೆ ಹೋಗಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page