August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ರಕರ್ತನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಅರಣ್ಯ ಅಧಿಕಾರಿಯ ಬಂಧನ

 

ಛತ್ತೀಸ್ ಗಢದ ಧಮ್ತಾರಿ ಜಿಲ್ಲೆಯ ಅರಣ್ಯ ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅರಣ್ಯ ಅಧಿಕಾರಿಯನ್ನು ಜನವರಿ 5ರಂದು ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾದೇಶಿಕ ಸುದ್ದಿ ವಾಹಿನಿಯ ವರದಿಗಾರ ಸಂದೀಪ್ ಶುಕ್ಲಾ ನೀಡಿದ ದೂರಿನ ಮೇರೆಗೆ ಸೀತಾನದಿ ಅರಣ್ಯ ವಲಯದ ವಲಯ ಅಧಿಕಾರಿ ನರೇಶ್ಚಂದ್ರ ಡಿಯೋನಾಗ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉದಂತಿ ಸೀತಾನದಿ ಹುಲಿ ಮೀಸಲು ಪ್ರದೇಶದ ಅಡಿಯಲ್ಲಿ ಸೀತಾನದಿ ವಲಯವು ರಾಜ್ಯದ ಧಮ್ತಾರಿ ಮತ್ತು ಗರಿಯಾಬಂದ್ ಜಿಲ್ಲೆಗಳಲ್ಲಿ ವ್ಯಾಪಿಸಿದೆ. ರಾಯ್ಪುರ ಮೂಲದ ಶುಕ್ಲಾ ಅವರು ಜನವರಿ 1ರಂದು ಅರಣ್ಯ ಚೆಕ್ ಪೋಸ್ಟ್ ಗೆ ಸಂಬಂಧಿಸಿದ ಸುದ್ದಿಯನ್ನು ವರದಿ ಮಾಡಲು ಧಮ್ತಾರಿ ಜಿಲ್ಲೆಯ ಬೊರೈ ಗ್ರಾಮಕ್ಕೆ ಹೋಗಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

You may also like

News

ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಮಾಧ್ಯಮ ತಜ್ಞೆ ಡಾ. ವಹೀದಾ ಸುಲ್ತಾನ ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (MCJ) ವಿಭಾಗದ ನಿವೃತ್ತ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ 70 ವರ್ಷ ಪ್ರಾಯದ ಡಾ. ವಹೀದಾ ಸುಲ್ತಾನಾ ಅವರು
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ

You cannot copy content of this page