April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹಾಭಾರತ ಸರಣಿ ತಾಳಮದ್ಧಳೆ – ಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್ ಬಿ. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ (ಚಿತ್ರವಾಹನ) ಜಯರಾಮ ಬಲ್ಯ (ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್.ಪಿ. ಸುರತ್ಕಲ್ (ಅರ್ಜುನ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ಅರ್ಕುಳದ ಬಳಿ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ವತಿಯಿಂದ  ಶ್ರದ್ಧಾಂಜಲಿ ಅರ್ಪಿಸಲಾಸಯಿತು. ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಕುಟುಂಬ ಮತ್ತು ಕಲಾಕ್ಷೇತ್ರಕ್ಕೆ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು.

ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮಾತನಾಡಿ ಕಲೆ ಮತ್ತು ಕಲಿಕೆಯಲ್ಲಿ ತೀವ್ರ ಆಸಕ್ತಿ ಇದ್ದ ಯುವ ಪ್ರತಿಭೆಯ ಕಣ್ಮರೆಯು ಅಘಾತಕಾರಿಯೆಂದರು. ಮೃತ ಕಲಾವಿದನ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page