August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹಾಭಾರತ ಸರಣಿ ತಾಳಮದ್ಧಳೆ – ಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್ ಬಿ. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ದೇವಿ ಪ್ರಸಾದ್ ಆಚಾರ್ಯ ಮಡಂತ್ಯಾರು, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಹಳೆನೇರೆಂಕಿ (ಚಿತ್ರವಾಹನ) ಜಯರಾಮ ಬಲ್ಯ (ಚಿತ್ರಾಂಗದೆ ಮತ್ತು ದುರ್ಜಯ) ಶ್ರೀಧರ ಎಸ್.ಪಿ. ಸುರತ್ಕಲ್ (ಅರ್ಜುನ) ಪೂರ್ಣಿಮಾ ರಾವ್ ಬೆಳ್ತಂಗಡಿ (ಉಲೂಪಿ) ಸಂಜೀವ ಪಾರೆಂಕಿ (ಕೌರವ್ಯ) ದಿವಾಕರ ಆಚಾರ್ಯ ಗೇರುಕಟ್ಟೆ (ವಿಕಟ) ಭಾಗವಹಿಸಿದ್ದರು. ಸುರೇಶ್ ಪುತ್ತೂರಾಯ ಊರುವಾಲು ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ದಾಂಜಲಿ ಅರ್ಪಣೆ: ಇತ್ತೀಚೆಗೆ ಅರ್ಕುಳದ ಬಳಿ ರಸ್ತೆ ದುರಂತದಲ್ಲಿ ನಿಧನರಾದ ಸಸಿಹಿತ್ಲು ಮೇಳದ ಯುವ ಕಲಾವಿದ ಬೆಳ್ತಂಗಡಿ ಮುಂಡೂರಿನ ಪ್ರವೀತ್ ಆಚಾರ್ಯ ಇವರಿಗೆ ಸಂಘದ ವತಿಯಿಂದ  ಶ್ರದ್ಧಾಂಜಲಿ ಅರ್ಪಿಸಲಾಸಯಿತು. ಎಳೆಯ ಪ್ರಾಯದಲ್ಲಿ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿರುವುದು ಕುಟುಂಬ ಮತ್ತು ಕಲಾಕ್ಷೇತ್ರಕ್ಕೆ ದೊಡ್ಡನಷ್ಟವೆಂದು ನುಡಿನಮನ ಸಲ್ಲಿಸಿದ ಸಂಘದ ಉಪಾಧ್ಯಕ್ಷ ಸಂಜೀವ ಪಾರೆಂಕಿ ತಿಳಿಸಿದರು.

ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮಾತನಾಡಿ ಕಲೆ ಮತ್ತು ಕಲಿಕೆಯಲ್ಲಿ ತೀವ್ರ ಆಸಕ್ತಿ ಇದ್ದ ಯುವ ಪ್ರತಿಭೆಯ ಕಣ್ಮರೆಯು ಅಘಾತಕಾರಿಯೆಂದರು. ಮೃತ ಕಲಾವಿದನ ಸದ್ಗತಿಗಾಗಿ ಪ್ರಾರ್ಥಿಸಲಾಯಿತು.

You may also like

News

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್‌ಸೈಟ್ ಅನಾವರಣ

“ಕಷ್ಟದಲ್ಲಿರುವವರಿಗೆ ನೆರವಾದ ತೃಪ್ತಿ ನನ್ನದು” – ಹರಿಕೃಷ್ಣ ಪುನರೂರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ತಮ್ಮಿಂದಾದ ನೆರವು ನೀಡಿದ ಸಂತೃಪ್ತಿ ಇದೆ. “ಕೊಟ್ಟದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ” ಎಂಬ ಮಾತಿನಂತೆ
News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ

You cannot copy content of this page