May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಮ್ತಾಝ್ ಆಲಿ ಪ್ರಕರಣದಲ್ಲಿ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

ಮಂಗಳೂರು : ಉದ್ಯಮಿ ಮುಮ್ತಾಝ್ ಆಲಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 6ರಂದು ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಲಯಕ್ಕೆ 600ಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಮುಖ ಆರೋಪಿ ಎನ್ನಲಾದ ಸುರತ್ಕಲ್ ಕೃಷ್ಣಾಪುರ ಏಳನೇ ಬ್ಲಾಕ್ ನಿವಾಸಿ ರಹ್ಮತ್ ಮತ್ತು ಆಕೆಯ ಪತಿ ಪ್ರಕರಣದ ಐದನೇ ಆರೋಪಿ ಶುಐಬ್, ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, ಎ4 ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫ ಹಾಗೂ ಆರನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣದ ತನಿಖಾಧಿಕಾರಿಯಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page