April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನಗೊಂಡ ‘ಅಲನಿ ಮೆಲೊಡಿ ನೈಟ್’

ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬತ್ತು ಹಾಡುಗಳನ್ನು ಹಾಡಿ ಮನ ರಂಜಿಸಿದಳು.

ಕಾರ್ಯಕ್ರಮದಲ್ಲಿ ಮೊದಲಿಗೆ ಮಾಂಡ್ ನಾಟಕ ತಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಆಯೋಜಿಸುವ ಕೊಂಕಣಿ ನಾಟಕ ‘ಸರ್ದಾರ್ ಸಿಮಾಂವ್’ ಇದರ ಬ್ಯಾನರ್ ಬಿಡುಗಡೆಯನ್ನು ಕಲಾಂಗಣ ಚೇರ್ ಮ್ಯಾನ್ ರೊನಾಲ್ಡ್ ಮೆಂಡೊನ್ಸಾ ನೆರವೇರಿಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ `ಗುಮಟ್ ಸಂಗೀತ ವಾದ್ಯವನ್ನು ಅಲನಿಗೆ ನೀಡಿ ಕೊಂಕಣಿ ಗಾಯನ ಪರಂಪರೆಯನ್ನು ಮುಂದುವರೆಸುವಂತೆ ಕೋರಿ ಶುಭ ಹಾರೈಸಿದರು. ದುಬಾಯಿಯ ಉದ್ಯಮಿ ಮತ್ತು ದಾನಿ ವಿಜಯ್ ಡಿಸೋಜ ಇವರು ಗಂಟೆ ಬಾರಿಸಿ ಚಾಲನೆ ನೀಡಿದರು. ವೇದಿಕೆಯಲ್ಲಿ ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಲುವಿ ಜೆ. ಪಿಂಟೊ, ಕೇರನ್ ಮಾಡ್ತಾ ಹಾಗೂ ಮಾಂಡ್ ನಾಟಕ ತಂಡದ ಪರವಾಗಿ ಅರುಣ್ ರಾಜ್ ರೊಡ್ರಿಗಸ್, ವಿದ್ದು ಉಚ್ಚಿಲ್ ಮತ್ತು ವಿಕಾಸ್ ಕಲಾಕುಲ್ ಉಪಸ್ಥಿತರಿದ್ದರು.

ನಂತರ ತಾಕೊಡೆಯ ಒಂಬತ್ತು ವರ್ಷದ ಬಾಲ ಗಾಯಕಿ ಆಲನಿ ಲಿಯೊರಾ ಡಿಸೋಜ ಮೇರು ಗೀತ ರಚನಕಾರರಾದ ಚಾಫ್ರಾ ಡಿಕೋಸ್ತಾ, ವಿಲ್ಫಿ ರೆಬಿಂಬಸ್, ಕ್ಲೊಡ್ ಡಿಸೋಜ, ಕ್ರಿಸ್ ಪೆರಿ, ಎರಿಕ್ ಒಝೇರಿಯೊ, ಮೆಲ್ವಿನ್ ಪೆರಿಸ್ ಮತ್ತು ಲೋಯ್ಡ್ ರೇಗೊ ಇವರ ಒಂಬತ್ತು ಹಾಡುಗಳನ್ನು ಹಾಡಿ ಕಲಾಂಗಣದಲ್ಲಿ ಕಿಕ್ಕಿರಿದು ತುಂಬಿದ ಜನರ ಮನ ರಂಜಿಸಿದಳು. ಮೇವಿಶ್ ಇವರ ಸಂಗೀತ ನಿರ್ದೇಶನದಲ್ಲಿ ಸಚಿನ್ ಸಿಕ್ವೇರಾ (ಡ್ರಮ್ಸ್), ಜೇಸನ್ ಡಿಸೋಜ (ಲೀಡ್ ಗಿಟಾರ್), ಆಶ್ವಿನ್ ಕೊರೆಯಾ (ಬೇಸ್ ಗಿಟಾರ್), ಶೊನ್ ಬ್ರಾಸ್ಲಿನ್ (ವಯೊಲಿನ್) ಮತ್ತು ಅಶ್ವಿಲ್ ಕುಲಾಸೊ (ಕೀಬೋರ್ಡ್) ಇವರು ಸಂಗೀತ ನೀಡಿದರು.

ತರಬೇತುದಾರರಾದ ಶಿಲ್ಪಾ ಕುಟಿನ್ಹಾ, ಯುವ ಗಾಯಕ ಆರ್ವಿನ್ ಡಿಕುನ್ಹಾ, ಮತ್ತು ಬ್ಲೂ ಏಂಜಲ್ಸ್ ಗಾಯನ ತಂಡವು ಗಾಯನದಲ್ಲಿ ಸಹಕರಿಸಿದರು. ರೋಶನ್ ಕುಲ್ಶೇಕರ್ ಇವರ ಸಂಗಡ ಮಕ್ಕಳಾದ ಸಂಜನಾ ಮತಾಯಸ್, ಏಂಜಲ್ ಕುಟಿನ್ಹಾ, ಅನಿಕಾ ಡಿಸೋಜ ಮತ್ತು ಶನನ್ ಡಿಕೋಸ್ತಾ ಇವರು ಸುಂದರವಾಗಿ ನಿರೂಪಿಸಿದರು. ಅಲನಿಯ ತಾಯಿ ಲೊಲಿಟಾ ಸಲ್ಡಾನ್ಹಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ನೆನಪಿನ ಕಾಣಿಕೆ ನೀಡಿದರು. ತಂದೆ ಅಜಯ್ ಗ್ಲೆನ್ ಡಿಸೋಜ ಧನ್ಯವಾದವನ್ನಿತ್ತರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page