September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ – ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ

ಮಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಇವರನ್ನು ನೇಮಕ ಮಾಡಿ‌ ಸರಕಾರ ಆದೇಶ ಮಾಡಿದೆ. ಗ್ರಾಮೀಣ‌ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಬಸ್‌ನಲ್ಲಿ ಓಡಾಟ ನಡೆಸಲು ಉಚಿತ ಬಸ್ ಪಾಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆ ಬಳಿಕ ಆದೇಶ ಕೂಡ ಮಾಡಲಾಗಿತ್ತು. ಇದೀಗ ಉಚಿತ ಬಸ್ ಪಾಸ್ ವಿತರಣೆ ಯೋಜನೆ ಅನುಷ್ಠಾನ ಮಾಡಲು ರಾಜ್ಯಮಟ್ಟದ ಆಯ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಯ್ಕೆ ಸಮಿತಿಗೆ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಿ ಆದೇಶ ಮಾಡಿದೆ.

ಸಮಿತಿಯಲ್ಲಿ 9 ಮಂದಿ ಸದಸ್ಯರಿರುತ್ತಾರೆ. ಗ್ರಾಮೀಣ ಪತ್ರಕರ್ತರ ಅರ್ಜಿಗಳನ್ನು ಪರಿಶೀಲಿಸಿ ಸೌಲಭ್ಯವನ್ನು ಮಂಜೂರು ಮಾಡಲು ಸಮಿತಿ ರಚಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಸದಸ್ಯರಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಶಾಖೆಯ ಜಂಟಿ ನಿರ್ದೇಶಕರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಯಾಗಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರು ವರದಿಗಾರರ ಕೂಟದ ಪ್ರತಿನಿಧಿಯಾಗಿ ಹಿರಿಯ ಪತ್ರಕರ್ತ ಎಂ. ಚಂದ್ರಶೇಖರ್, ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪ್ರತಿನಿಧಿಯಾಗಿ ಹೆಚ್.ಎಲ್. ಸುರೇಶ್, ಬೆಂಗಳೂರು ಪೋಟೋ ಜರ್ನಲಿಸ್ಟ್ ಸಂಘದ ಪ್ರತಿನಿಧಿಯಾಗಿ ಮೋಹನ್ ಕುಮಾರ್, ವಿಶೇಷ ಆಮಂತ್ರಿತ ಪ್ರತಿನಿಧಿಗಳಾಗಿ ಗಂಗಾಧರ್ ಬಂಡಿವಾಳ್ ಹಾಗೂ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು‌ ಸರಕಾರ ನಾಮ ನಿರ್ದೇಶನ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಶಾಖೆಯ ಉಪ ನಿರ್ದೇಶಕರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page