May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಮೂಡ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ಕಾರುಬಾರು – ಕಡತ ತಿದ್ದುತ್ತಿದ್ದ ವಿಡಿಯೋ ವೈರಲ್

ಸಾರ್ವಜನಿಕರಿಂದ ಭಾರೀ ಆಕ್ರೋಶ

ಮಂಗಳೂರು ಮುಡಾ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ಕಾರುಬಾರು ಎನ್ನುವುದಕ್ಕೆ ಸಾಕ್ಷಿ ಎಂಬಂತೆ ಮಧ್ಯವರ್ತಿಯೊಬ್ಬ ಕಡತ ಪರಿಶೀಲಿಸಿ ತನ್ನ ಪೆನ್‌ನಲ್ಲಿ ಕಡತ ತಿದ್ದುತ್ತಿರುವ ವೀಡಿಯೋ ವೈರಲ್ ಆಗಿದೆ. ಜನವರಿ 7ರಂದು ಮಧ್ಯಾಹ್ನ 1.30ಕ್ಕೆ ಸಿಸಿಟಿವಿಯಲ್ಲಿ ರೆಕಾರ್ಡ್ ಆದ ವೀಡಿಯೊದಲ್ಲಿ ಪತ್ತೆಯಾಗಿದೆ. ಮಧ್ಯವರ್ತಿಯೊಬ್ಬ ಮೂಡಾದ ಮೊದಲ ಮಹಡಿಯಲ್ಲಿರುವ ಕಚೇರಿಗೆ ಬಂದು, ಮಧ್ಯಾಹ್ನ ಊಟದ ಸಮಯವಾದ ಕಾರಣ ಅಲ್ಲಿ ಯಾರೂ ಇಲ್ಲದೇ ಇರುವುದನ್ನು ಗಮನಿಸಿ ಕಚೇರಿಯ ಒಳಗೆ ನುಗ್ಗಿ ಮೇಜಿನ ಮೇಲಿದ್ದ ಕಡತಗಳಲ್ಲಿ ತನಗೆ ಬೇಕಾದದ್ದನ್ನು ಆರಿಸಿ, ತನ್ನದೇ ಪೆನ್ ನಿಂದ ಕಡತದಲ್ಲಿರುವ ದಸ್ತಾವೇಜುಗಳನ್ನು ತಿದ್ದುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸಿರೆಹಿಡಿಯಲಾಗಿದೆ.

ಆದರೆ ಮಧ್ಯವರ್ತಿ ಅಕ್ರಮ ಪ್ರವೇಶದ ಬಗ್ಗೆ ಮುಡಾ ಅಧಿಕಾರಿಗಳು ಇನ್ನೂ ಪೊಲೀಸರಿಗೆ ದೂರು ನೀಡದಿರುವುದು ಸಾರ್ವಜನಿಕರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page