May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ಹೋಬಳಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ನಿಯುಕ್ತಿ

ಬಹುಭಾಷಾ ಸಾಹಿತಿಗಳು, ಹದಿನೈದು ಪುಸ್ತಕಗಳ ಪ್ರಕಾಶನ ಮಾಡಿದ, ಕಳೆದ ನಲ್ವತ್ತು ವರ್ಷಗಳ ಹಿರಿಯ ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ಹೋಬಳಿ ಅಧ್ಯಕ್ಷರನ್ನಾಗಿ ಮಾಡಿ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ ಆದೇಶ ನೀಡಿದ್ದಾರೆ.

“ಪತಿ ಪತ್ನಿ ಸುತಾಲಯ” (ಡೈವರ್ಸ್ ಆಗದ ಹಾಗೆ ಸೂತ್ರಗಳು) ಬಹುಚರ್ಚಿತ ಲೈಬ್ರರಿ ಸ್ವೀಕೃತ ಹಾಗೂ ಕೊಂಕಣಿ, ತುಳು, ಬ್ಯಾರಿ ಭಾಷೆಯಲ್ಲಿ ವಿಮರ್ಶೆಗೆ ಬೇಡಿಕೆಯ ಪುಸ್ತಕವೂ ಸೇರಿದಂತೆ ಸಕಲಾಭರಣ, ಆಭರಣಗಳು ಗದ್ಯ ಪುಸ್ತಕಗಳನ್ನು ಹಾಗೂ ನನ್ನವಳ ಕವಳ ಕವಿತಾ ಸಂಗ್ರಹವು ಕನ್ನಡದ ಇವರ ಬಹುಬೇಡಿಕೆಯ ಇತರ ಕೃತಿಗಳು.

ಮಾತೃಭಾಷೆ ಕೊಂಕಣಿಯಲ್ಲಿ ಎಂಟು ಕೃತಿಗಳು ಪ್ರಕಟವಾಗಿವೆ. ತುಳುವಿನ ಮೊದಲ ಕೃತಿ ಮುದ್ರಣದಲ್ಲಿ ಇದೆ. ಕಳೆದ ವರ್ಷ 26ನೇ ಮಂಗಳೂರು ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಿತ ಸಮಯದಲ್ಲಿ ಸಮ್ಮೇಳನದ ಎಲ್ಲಾ ಕಾರ್ಯಕ್ರಮಗಳನ್ನು ಆರಂಭ ಮತ್ತು ಸಮಾರೋಪವನ್ನು ಡಾ. ಮೀನಾಕ್ಷಿ ರಾಮಚಂದ್ರ ಜೊತೆಗೆ ಸೇರಿ ಮಾಡಿ ಸಾಹಿತ್ಯ ಮತ್ತು ಸಂಘಟಕರ ಮೆಚ್ಚುಗೆ ಗಳಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿ ಸದಸ್ಯರಾಗಿ ನೇಮಕಗೊಂಡ ನಿಕಟಪೂರ್ವ ಅಧ್ಯಕ್ಷ ಪ್ರೊಫೆಸರ್ ಪುಷ್ಪರಾಜ್ ಶುಭಾಶಯ ಕೋರಿ ಹರ್ಷ ವ್ಯಕ್ತಪಡಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page