February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಟೆಕಾರು ವ್ಯವಸಾಯ ಸಹಕಾರಿ ಸೇವಾ ಸಂಘದಲ್ಲಿ ಹಾಡುಹಗಲೇ ದರೋಡೆ – ಬಂದೂಕು ತೋರಿಸಿ ನಗ-ನಗದು ಕಳವು

ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಸೇವಾ ಸಂಘದಲ್ಲಿ ಹಾಡುಹಗಲೇ ಶಸ್ತ್ರಸಜ್ಜಿತರಾಗಿ ನುಗ್ಗಿದ 5-6 ಮಂದಿ ದುಷ್ಕರ್ಮಿಗಳ ತಂಡ ಸುಮಾರು 10-12 ಕೋಟಿ ರೂ. ಮೌಲ್ಯದ ನಗ-ನಗದು ದರೋಡೆಗೈದು ಪರಾರಿಯಾಗಿರುವ ಘಟನೆ ಇಂದು ಜನವರಿ 17ರಂದು ಶುಕ್ರವಾರ ಬೆಳಗ್ಗೆ 11:30ರಿಂದ ಮಧ್ಯಾಹ್ನ 12:30ರ ನಡುವೆ ನಡೆದಿದೆ.

ದುಷ್ಕರ್ಮಿಗಳೆಲ್ಲರೂ 25 ರಿಂದ 35 ವರ್ಷ ವಯಸ್ಸಿನವರೆಂದು ಅಂದಾಜಿಸಲಾಗಿದ್ದು, ಹಿಂದಿ ಮಾತನಾಡುತ್ತಿದ್ದರು. ಮಾಸ್ಕ್ ಧರಿಸಿ, ಪಿಸ್ತೂಲ್, ತಲ್ವಾರ್ ಮತ್ತು ಚಾಕು ಸೇರಿದಂತೆ ವಿವಿಧ ಶಸ್ತ್ರಾಸ್ತ್ರಗಳೊಂದಿಗೆ ಬ್ಯಾಂಕ್ ಗೆ ಹೊಕ್ಕ ದುಷ್ಕರ್ಮಿಗಳು, ಬ್ಯಾಂಕ್ ನಲ್ಲಿದ್ದ 4-5 ಮಂದಿ ಸಿಬ್ಬಂದಿಯನ್ನು ಬೆದರಿಸಿ ಸುಮಾರು 10-12 ಕೋಟಿ ರೂಪಾಯಿ ಮೌಲ್ಯದ ನಗ ನಗದನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಕಪ್ಪು ಬಣ್ಣದ ಫಿಯೆಟ್ ಕಾರಿನಲ್ಲಿ ಬಂದಿದ್ದು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣದ ತನಿಖೆ ಮತ್ತು ಆರೋಪಿಗಳನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಲಭ್ಯವಿರುವ ಸುಳಿವುಗಳು ಮತ್ತು ತಾಂತ್ರಿಕ ಕಣ್ಣಾವಲು ಆಧರಿಸಿ ಶಂಕಿತರನ್ನು ಪತ್ತೆಹಚ್ಚಲು ಪ್ರಯತ್ನಗಳನ್ನು ತೀವ್ರಗೊಳಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page