May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಆಯ್ಕೆ

ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಮಸೀದಿಯ ಗೌರವಾಧ್ಯಕ್ಷ ಸಯ್ಯಿದ್ ಅಲೀ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಮಸೀದಿಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಸಿದ್ದೀಕ್ ಪರ್ಲೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ (ಅಮ್ಮಿ) ಪರ್ಲೊಟ್ಟು, ಕೋಶಾಧಿಕಾರಿಯಾಗಿ ಪಿ.ಕೆ. ಅಬ್ಬಾಸ್ ಪರ್ಲೊಟ್ಟು ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲತೀಫ್ ನೇರಳಕಟ್ಟೆ, ಹಬೀಬ್ ಕೊಡಾಜೆ, ಫಾರೂಕ್ ಗೋಳಿಕಟ್ಟೆ ಹಾಗೂ ಇಸ್ಮಾಯಿಲ್ ನೇರಳಕಟ್ಟೆ ಅವರನ್ನು ಸಭೆಯಲ್ಲಿ ಆರಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಇಬ್ರಾಹಿಂ ರಾಜ್ ಕಮಲ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದರು. ಇಲ್ಯಾಸ್ ನೇರಳಕಟ್ಟೆ ಸ್ವಾಗತಿಸಿದರು.  ನವಾಝ್ ಭಗವಂತ ಕೋಡಿ ವರದಿ ವಾಚಿಸಿ, ಲೆಕ್ಕ ಪತ್ರ ಮಂಡಿಸಿದರು.  ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ ವಂದಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page