September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಆಯ್ಕೆ

ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಮಸೀದಿಯ ಗೌರವಾಧ್ಯಕ್ಷ ಸಯ್ಯಿದ್ ಅಲೀ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಮಸೀದಿಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಸಿದ್ದೀಕ್ ಪರ್ಲೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ (ಅಮ್ಮಿ) ಪರ್ಲೊಟ್ಟು, ಕೋಶಾಧಿಕಾರಿಯಾಗಿ ಪಿ.ಕೆ. ಅಬ್ಬಾಸ್ ಪರ್ಲೊಟ್ಟು ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲತೀಫ್ ನೇರಳಕಟ್ಟೆ, ಹಬೀಬ್ ಕೊಡಾಜೆ, ಫಾರೂಕ್ ಗೋಳಿಕಟ್ಟೆ ಹಾಗೂ ಇಸ್ಮಾಯಿಲ್ ನೇರಳಕಟ್ಟೆ ಅವರನ್ನು ಸಭೆಯಲ್ಲಿ ಆರಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಇಬ್ರಾಹಿಂ ರಾಜ್ ಕಮಲ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದರು. ಇಲ್ಯಾಸ್ ನೇರಳಕಟ್ಟೆ ಸ್ವಾಗತಿಸಿದರು.  ನವಾಝ್ ಭಗವಂತ ಕೋಡಿ ವರದಿ ವಾಚಿಸಿ, ಲೆಕ್ಕ ಪತ್ರ ಮಂಡಿಸಿದರು.  ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ ವಂದಿಸಿದರು.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page