August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಗ್ಗಿ ಹೇಳುವಾಗ ತಪ್ಪಿತ್ತೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕ – ಪಾಪೆಮಜಲು ಸರಕಾರಿ ಶಾಲೆಯಲ್ಲಿ ಘಟನೆ

ಪುತ್ತೂರು : 8ನೇ ತರಗತಿ ವಿದ್ಯಾರ್ಥಿ ಮಗ್ಗಿ ಹೇಳುವಾಗ ತಪ್ಪಿತ್ತೆಂದು ವಿದ್ಯಾರ್ಥಿಗೆ ಶಿಕ್ಷಕರೋರ್ವರು ಹೊಡೆದು ವಿದ್ಯಾರ್ಥಿಯ ಎಡ ಕೈ ಮೂಳೆಗೆ ಗಾಯವಾದ ಘಟನೆ ಪಾಪೆಮಜಲು ಸರಕಾರಿ ಶಾಲೆಯಲ್ಲಿ ನಡೆದಿದೆ.

ಶಾಲೆಯಲ್ಲಿ ಗಣಿತ ಶಿಕ್ಷಕರ ಮುಂದೆ ವಿದ್ಯಾರ್ಥಿ ಮಗ್ಗಿ ಹೇಳುವಾಗ ತಪ್ಪಿದ್ದಕ್ಕೆ ಅವರು ಬೆತ್ತದಿಂದ ಹೊಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿದ್ಯಾರ್ಥಿ ಮನೆಯಲ್ಲಿ ತಾಯಿ ಮತ್ತು ಅಜ್ಜ ರವರಲ್ಲಿ ಈ ವಿಚಾರ ತಿಳಿಸಿ ಕೈ ನೋವು ಆಗುತ್ತಿರುವುದಾಗಿ ಹೇಳಿದ್ದರು. ಬಳಿಕ ಅಜ್ಜರವರು ಮೊಮ್ಮಗನನ್ನು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಕೈ ಮೂಳೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ಕೈ ಊನಗೊಂಡಿದೆ ಎಂದು ತಿಳಿದುಬಂದಿದೆ.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page