March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯಾರ್ಥಿಗೆ UKಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ

ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬ‌ಂಧಿತ ಆರೋಪಿಗಳನ್ನು 24 ವರ್ಷ ಪ್ರಾಯದ ಸುಮನ್ ಎಸ್., 22 ವರ್ಷ ಪ್ರಾಯದ ಸುಹಾನ್ ಖಾನ್ ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ.

ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು UKಯಲ್ಲಿ ಮಾಡಲು ಬಯಸಿದ್ದರು. ಇವರು ದುಬೈಗೆ ತೆರಳಿ ಅಫ್ತಾಬ್ ನನ್ನು ಭೇಟಿ ಮಾಡಿದ್ದು, ನಂತರ UKಯಲ್ಲಿ M.PH ವಿಧ್ಯಾಭ್ಯಾಸಕ್ಕಾಗಿ ಸೀಟಿಗೆ 18 ಲಕ್ಷಕ್ಕೆ ಇಬ್ಬರ ನಡುವೆ ಒಪ್ಪಂದವಾಗಿತ್ತು. ಅಫ್ತಾಬ್ ವಿದ್ಯಾರ್ಥಿಗೆ ಸೀಟನ್ನು ಖಾಯಂ ಮಾಡಲು ಮೊದಲಿಗೆ 8.5 ಲಕ್ಷ ರೂಪಾಯಿಯನ್ನು ನೀಡುವಂತೆ ಕೇಳಿದ್ದ. ಅದನ್ನು ವಿದ್ಯಾರ್ಥಿ ನೀಡಿದ್ದ. ನಂತರ ಆರೋಪಿಗಳು ವಿದ್ಯಾರ್ಥಿಯ ಕರೆಯನ್ನು ಸ್ವೀಕರಿಸದೇ UKಯಲ್ಲಿ M.PH ವಿಧ್ಯಾಭ್ಯಾಸಕ್ಕೆ ಸೀಟನ್ನೂ ಕೊಡಿಸದೇ ವಂಚಿಸಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಮೂವರನ್ನು ಬಂಧಿಸಿರುವ ಪೊಲೀಸರು ಅವರಿಂದ 5 ಲಕ್ಷ ರೂಪಾಯಿ ನಗದು, ಇನ್ನೋವಾ ಕಾರು ಮತ್ತು 2 ಮೊಬೈಲ್ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 9,56,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page