September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯಾರ್ಥಿಗೆ UKಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ

ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬ‌ಂಧಿತ ಆರೋಪಿಗಳನ್ನು 24 ವರ್ಷ ಪ್ರಾಯದ ಸುಮನ್ ಎಸ್., 22 ವರ್ಷ ಪ್ರಾಯದ ಸುಹಾನ್ ಖಾನ್ ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ.

ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು UKಯಲ್ಲಿ ಮಾಡಲು ಬಯಸಿದ್ದರು. ಇವರು ದುಬೈಗೆ ತೆರಳಿ ಅಫ್ತಾಬ್ ನನ್ನು ಭೇಟಿ ಮಾಡಿದ್ದು, ನಂತರ UKಯಲ್ಲಿ M.PH ವಿಧ್ಯಾಭ್ಯಾಸಕ್ಕಾಗಿ ಸೀಟಿಗೆ 18 ಲಕ್ಷಕ್ಕೆ ಇಬ್ಬರ ನಡುವೆ ಒಪ್ಪಂದವಾಗಿತ್ತು. ಅಫ್ತಾಬ್ ವಿದ್ಯಾರ್ಥಿಗೆ ಸೀಟನ್ನು ಖಾಯಂ ಮಾಡಲು ಮೊದಲಿಗೆ 8.5 ಲಕ್ಷ ರೂಪಾಯಿಯನ್ನು ನೀಡುವಂತೆ ಕೇಳಿದ್ದ. ಅದನ್ನು ವಿದ್ಯಾರ್ಥಿ ನೀಡಿದ್ದ. ನಂತರ ಆರೋಪಿಗಳು ವಿದ್ಯಾರ್ಥಿಯ ಕರೆಯನ್ನು ಸ್ವೀಕರಿಸದೇ UKಯಲ್ಲಿ M.PH ವಿಧ್ಯಾಭ್ಯಾಸಕ್ಕೆ ಸೀಟನ್ನೂ ಕೊಡಿಸದೇ ವಂಚಿಸಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಮೂವರನ್ನು ಬಂಧಿಸಿರುವ ಪೊಲೀಸರು ಅವರಿಂದ 5 ಲಕ್ಷ ರೂಪಾಯಿ ನಗದು, ಇನ್ನೋವಾ ಕಾರು ಮತ್ತು 2 ಮೊಬೈಲ್ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 9,56,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page